7:11 AM Saturday2 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ವಿದ್ಯುತ್ ದರ ಏರಿಕೆಯಿಂದ ಕುಕ್ಕುಟೋದ್ಯಮಕ್ಕೆ ಹೊಡೆತ: ಸರಕಾರದ ಕ್ರಮಕ್ಕೆ ಕೆಪಿಎಫ್‌ಬಿಎ ವಿರೋಧ

27/06/2023, 14:53

ಬೆಂಗಳೂರು(reporterkarnataka.com): ರಾಜ್ಯದಲ್ಲಿ ವಿದ್ಯುತ್ ದರ ಪ್ರತಿ ಯುನಿಟ್‌ಗೆ 2.89 ರೂ.ಗೆ ಏರಿಕೆಯಾಗಿರುವುದ್ದರಿಂದ ಅನೇಕ ಕೋಳಿ ಸಾಕಣೆ ಕೇಂದ್ರಗಳು ಮತ್ತು ಸಂಸ್ಕರಣಾ ಘಟಕಗಳನ್ನು ನಡೆಸಲು ಸಾಧ್ಯವಿಲ್ಲವೆಂದು ಕರ್ನಾಟಕ ಪೌಲ್ಟ್ರಿ ಫಾರ್ಮರ್ಸ್‌ ಮತ್ತು ಬ್ರೀಡರ್ಸ್‌ ಅಸೋಸಿಯೇಶನ್(ಕೆಪಿಎಫ್‌ಬಿಎ) ವಿದ್ಯುತ್ ದರ ಏರಿಕೆಗೆ ವಿರೋಧ ವ್ಯಕ್ತಪಡಿಸಿದೆ.
ಕೆಪಿಎಫ್‌ಬಿಎ ಅಧ್ಯಕ್ಷ ಡಾ. ಸುಶಾಂತ್ ಬಿ.ರೈ ಮಾತನಾಡಿ, ವಿದ್ಯುತ್ ದರದ ಹೆಚ್ಚಳವು ಈಗಾಗಲೇ ಅತ್ಯಂತ ಕಡಿಮೆ ಲಾಭದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋಳಿ ಫಾರಂಗಳಿಗೆ ಹೆಚ್ಚುವರಿ ಹೊರೆಯಾಗಲಿದ್ದು, ಕೋಳಿ ಘಟಕಗಳು ಮತ್ತು ಫೀಡ್ ತಯಾರಿಕೆಯ ಉತ್ಪಾದನಾ ವೆಚ್ಚದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ. ಇದರ ಪರಿಣಾಮವಾಗಿ ಗ್ರಾಹಕರಿಗೂ ಖರೀದಿಯಲ್ಲಿಯೂ ದರ ಏರಿಕೆಯಾಗುವುದರಿಂದ ಸಮಸ್ಯೆಯಾಗುತ್ತದೆ. ಇದರೊಂದಿಗೆ ಅನೇಕ ಘಟಕಗಳು ತಮಿಳುನಾಡಿನ ಹೊಸೂರಿಗೆ ಮತ್ತು ನೆರೆಯ ರಾಜ್ಯಗಳಾದ ಕೇರಳ, ಆಂದ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರದ ಇತರ ಗಡಿ ಪ್ರದೇಶಗಳಿಗೆ ವಲಸೆ ಹೋಗುತ್ತವೆ ಇದರಿಂದ ರಾಜ್ಯದ ಆದಾಯ ಜತೆಗೆ ಉದ್ಯೋಗ ಸೃಷ್ಟಿಯಲ್ಲೂ ನಷ್ಟವಾಗುತ್ತದೆ. ಕೋಳಿ ಮತ್ತು ಮೇವು ತಯಾರಿಕಾ ವಲಯದ ಹಿತಾಸಕ್ತಿಯಿಂದ ಮಾತ್ರವಲ್ಲದೆ ಹೂಡಿಕೆಯ ತಾಣವಾಗಿರುವ ಹಿನ್ನೆಲೆ ರಾಜ್ಯದ ಹೆಚ್ಚಿನ ಹಿತಾಸಕ್ತಿಯಲ್ಲಿ ವಿದ್ಯುತ್ ದರದ ಏರಿಕೆಯನ್ನು ತಕ್ಷಣವೇ ಹಿಂತೆಗೆದುಕೊಳ್ಳುವಂತೆ ಕೆಪಿಎಫ್‌ಬಿಎ ಸರ್ಕಾರವನ್ನು ಒತ್ತಾಯಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು