2:33 PM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ವಿದ್ಯುತ್ ದರ ಏರಿಕೆ: ರಾಜ್ಯ ಸರಕಾರ ವಿರುದ್ಧ ಬಿ.ಸಿ. ರೋಡ್ ನಲ್ಲಿ ಬಿಜೆಪಿ ಪ್ರತಿಭಟನೆ

05/06/2023, 21:51

ಬಂಟ್ವಾಳ(reporterkarnataka.com): ವಿದ್ಯುತ್ ದರವನ್ನು ರಾಜ್ಯ ಸರಕಾರ ಹೆಚ್ಚಿಸಿದ್ದನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿಯ ಬಂಟ್ವಾಳ ಮಂಡಲ ವತಿಯಿಂದ ಪ್ರತಿಭಟನೆ ಬಿ.ಸಿ.ರೋಡ್ ನ ಫ್ಲೈಓವರ್ ಬಳಿ ಪ್ರತಿಭಟನೆ ಸೋಮವಾರ ಬೆಳಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉಪಸ್ಥಿತಿಯಲ್ಲಿ ನಡೆಯಿತು.


ಈ ಸಂದರ್ಭ ಮಾತನಾಡಿದ ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಮಾತನಾಡಿ, ಕಾಂಗ್ರೆಸ್ ತನ್ನ ಗ್ಯಾರಂಟಿ ಘೋಷಣೆ ಮೂಲಕ ಅಧಿಕಾರಕ್ಕೆ ಬಂದಿದ್ದು, ಇದು ರಾಜ್ಯದ ಹಿತಾಸಕ್ತಿಗೆ ಮಾರಕವಾಗಿದೆ. ಇನ್ನು ಒಂದು ವರ್ಷದೊಳಗೆ ಕಾಂಗ್ರೆಸ್ ಪಕ್ಷವನ್ನೂ ಗ್ಯಾರಂಟಿ ದಿವಾಳಿ ಮಾಡುವುದರೊಂದಿಗೆ ರಾಜ್ಯವನ್ನು ಪಾಕಿಸ್ತಾನ್, ವೆಜೆಜುವೆಲಾ ಮಾದರಿ ಆರ್ಥಿಕ ದಿವಾಳಿತನಕ್ಕೆ ಕೊಂಡೊಯ್ಯುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ಬಿಜೆಪಿ ರಾಜ್ಯ ವಕ್ತಾರ ವಿಕಾಸ್ ಪುತ್ತೂರು ಮಾತನಾಡಿ, ಪಂಚ ಗ್ಯಾರಂಟಿಗಳು ಅನುಷ್ಠಾನಕ್ಕೇ ಯೋಗ್ಯವಾದುದಲ್ಲ, ವಿದ್ಯುತ್ ಉಚಿತ ಎಂದು ಒಂದೆಡೆ ಹೇಳಿ, ಮತ್ತೊಂದೆಡೆಯಿಂದ ದರ ಏರಿಕೆ ಮಾಡುತ್ತಿದೆ. ನಿರುದ್ಯೋಗಿಗಳ ಭತ್ತೆಗೆ ಈಗ ಕಂಡೀಶನ್ ಹಾಕಲಾಗುತ್ತಿದೆ, ಸರಕಾರ ಊಸರವಳ್ಳಿಯಂತೆ ಬಣ್ಣ ಬದಲಾಯಿಸುತ್ತಿದೆ ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಘೋಷಣೆ ಮಾಡಿ ಅಧಿಕಾರಕ್ಕೆ ಬಂದಿದ್ದು, ಅಂದು ಹೇಳಿದ ಮಾತಿಗೆ ವ್ಯತಿರಿಕ್ತವಾಗಿ ಇಂದು ಷರತ್ತುಗಳನ್ನು ಹಾಕಲಾಗುತ್ತಿದೆ. ತಾನು ನೀಡಿದ ಆಶ್ವಾಸನೆಯನ್ನು ಮರೆಮಾಚುವ ಮೂಲಕ ಜನರ ದಾರಿ ತಪ್ಪಿಸುತ್ತಿದೆ ಎಂದು ಹೇಳಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ,ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಮುಖರಾದ ಮಾಧವ ಮಾವೆ, ಸುಲೋಚನಾ ಜಿ.ಕೆ.ಭಟ್, ಕಮಲಾಕ್ಷಿ ಪೂಜಾರಿ, ರಮಾನಾಥ ರಾಯಿ, ಸುದರ್ಶನ ಬಜ, ಪುರುಷೋತ್ತಮ ಶೆಟ್ಟಿ ವಾಮದಪದವು, ಪುರುಷೋತ್ತಮ ಸಾಲಿಯಾನ್ ನರಿಕೊಂಬು, ಡೊಂಬಯ ಅರಳ, ರವೀಶ್ ಶೆಟ್ಟಿ ಕರ್ಕಳ, ಸುರೇಶ್ ಕೋಟ್ಯಾನ್, ಗಣೇಶ್ ರೈ ಮಾಣಿ, ನಂದರಾಮ ರೈ, ಜಯರಾಮ ನಾಯ್ಕ್ ಕುಂಟ್ರಕಳ, ಪ್ರಕಾಶ್ ಅಂಚನ್, ಕೇಶವ ದೈಪಲ್, ಯಶೋಧರ ಕರ್ಬೆಟ್ಟು, ಧನಂಜಯ ಶೆಟ್ಟಿ ಸರಪಾಡಿ, ಪ್ರಭಾಕರ ಪ್ರಭು, ರಾಜಾರಾಮ ನಾಯಕ್, ದಿನೇಶ್ ದಂಬೆದಾರ್, ಹರಿಪ್ರಸಾದ್ ಸಹಿತ ಬಿಜೆಪಿಯ ಪ್ರಮುಖ ಪದಾಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು