8:54 AM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ವಿದ್ಯುತ್ ದರ ಏರಿಕೆ: ರಾಜ್ಯ ಸರಕಾರ ವಿರುದ್ಧ ಬಿ.ಸಿ. ರೋಡ್ ನಲ್ಲಿ ಬಿಜೆಪಿ ಪ್ರತಿಭಟನೆ

05/06/2023, 21:51

ಬಂಟ್ವಾಳ(reporterkarnataka.com): ವಿದ್ಯುತ್ ದರವನ್ನು ರಾಜ್ಯ ಸರಕಾರ ಹೆಚ್ಚಿಸಿದ್ದನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿಯ ಬಂಟ್ವಾಳ ಮಂಡಲ ವತಿಯಿಂದ ಪ್ರತಿಭಟನೆ ಬಿ.ಸಿ.ರೋಡ್ ನ ಫ್ಲೈಓವರ್ ಬಳಿ ಪ್ರತಿಭಟನೆ ಸೋಮವಾರ ಬೆಳಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉಪಸ್ಥಿತಿಯಲ್ಲಿ ನಡೆಯಿತು.


ಈ ಸಂದರ್ಭ ಮಾತನಾಡಿದ ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಮಾತನಾಡಿ, ಕಾಂಗ್ರೆಸ್ ತನ್ನ ಗ್ಯಾರಂಟಿ ಘೋಷಣೆ ಮೂಲಕ ಅಧಿಕಾರಕ್ಕೆ ಬಂದಿದ್ದು, ಇದು ರಾಜ್ಯದ ಹಿತಾಸಕ್ತಿಗೆ ಮಾರಕವಾಗಿದೆ. ಇನ್ನು ಒಂದು ವರ್ಷದೊಳಗೆ ಕಾಂಗ್ರೆಸ್ ಪಕ್ಷವನ್ನೂ ಗ್ಯಾರಂಟಿ ದಿವಾಳಿ ಮಾಡುವುದರೊಂದಿಗೆ ರಾಜ್ಯವನ್ನು ಪಾಕಿಸ್ತಾನ್, ವೆಜೆಜುವೆಲಾ ಮಾದರಿ ಆರ್ಥಿಕ ದಿವಾಳಿತನಕ್ಕೆ ಕೊಂಡೊಯ್ಯುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ಬಿಜೆಪಿ ರಾಜ್ಯ ವಕ್ತಾರ ವಿಕಾಸ್ ಪುತ್ತೂರು ಮಾತನಾಡಿ, ಪಂಚ ಗ್ಯಾರಂಟಿಗಳು ಅನುಷ್ಠಾನಕ್ಕೇ ಯೋಗ್ಯವಾದುದಲ್ಲ, ವಿದ್ಯುತ್ ಉಚಿತ ಎಂದು ಒಂದೆಡೆ ಹೇಳಿ, ಮತ್ತೊಂದೆಡೆಯಿಂದ ದರ ಏರಿಕೆ ಮಾಡುತ್ತಿದೆ. ನಿರುದ್ಯೋಗಿಗಳ ಭತ್ತೆಗೆ ಈಗ ಕಂಡೀಶನ್ ಹಾಕಲಾಗುತ್ತಿದೆ, ಸರಕಾರ ಊಸರವಳ್ಳಿಯಂತೆ ಬಣ್ಣ ಬದಲಾಯಿಸುತ್ತಿದೆ ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಘೋಷಣೆ ಮಾಡಿ ಅಧಿಕಾರಕ್ಕೆ ಬಂದಿದ್ದು, ಅಂದು ಹೇಳಿದ ಮಾತಿಗೆ ವ್ಯತಿರಿಕ್ತವಾಗಿ ಇಂದು ಷರತ್ತುಗಳನ್ನು ಹಾಕಲಾಗುತ್ತಿದೆ. ತಾನು ನೀಡಿದ ಆಶ್ವಾಸನೆಯನ್ನು ಮರೆಮಾಚುವ ಮೂಲಕ ಜನರ ದಾರಿ ತಪ್ಪಿಸುತ್ತಿದೆ ಎಂದು ಹೇಳಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ,ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಮುಖರಾದ ಮಾಧವ ಮಾವೆ, ಸುಲೋಚನಾ ಜಿ.ಕೆ.ಭಟ್, ಕಮಲಾಕ್ಷಿ ಪೂಜಾರಿ, ರಮಾನಾಥ ರಾಯಿ, ಸುದರ್ಶನ ಬಜ, ಪುರುಷೋತ್ತಮ ಶೆಟ್ಟಿ ವಾಮದಪದವು, ಪುರುಷೋತ್ತಮ ಸಾಲಿಯಾನ್ ನರಿಕೊಂಬು, ಡೊಂಬಯ ಅರಳ, ರವೀಶ್ ಶೆಟ್ಟಿ ಕರ್ಕಳ, ಸುರೇಶ್ ಕೋಟ್ಯಾನ್, ಗಣೇಶ್ ರೈ ಮಾಣಿ, ನಂದರಾಮ ರೈ, ಜಯರಾಮ ನಾಯ್ಕ್ ಕುಂಟ್ರಕಳ, ಪ್ರಕಾಶ್ ಅಂಚನ್, ಕೇಶವ ದೈಪಲ್, ಯಶೋಧರ ಕರ್ಬೆಟ್ಟು, ಧನಂಜಯ ಶೆಟ್ಟಿ ಸರಪಾಡಿ, ಪ್ರಭಾಕರ ಪ್ರಭು, ರಾಜಾರಾಮ ನಾಯಕ್, ದಿನೇಶ್ ದಂಬೆದಾರ್, ಹರಿಪ್ರಸಾದ್ ಸಹಿತ ಬಿಜೆಪಿಯ ಪ್ರಮುಖ ಪದಾಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು