6:14 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ವಿದ್ಯುತ್ ದರ ಏರಿಕೆ: ಏಪ್ರಿಲ್ 11ರಂದು ಮಂಗಳೂರಿನ ಮೆಸ್ಕಾಂ ಕೇಂದ್ರ ಕಚೇರಿಗೆ ಮುತ್ತಿಗೆ

08/04/2022, 11:08

ಮಂಗಳೂರು(reporterkarnataka.com): ವಿದ್ಯುತ್ ದರ ವಿಪರೀತ ಏರಿಕೆ ಮಾಡಿದ ರಾಜ್ಯ ಸರಕಾರದ ವಿರುದ್ದ ಹಾಗೂ ಏರಿಕೆ ಮಾಡಿದ ದರ ವಾಪಸಾತಿಗೆ ಒತ್ತಾಯಿಸಿ ಡಿವೈಎಫ್ಐ, ಎಸ್ಎಫ್ಐ, ಜೆಎಂಎಸ್ ದ.ಕ. ಜಿಲ್ಲಾ ಸಮಿತಿಯು ಮೆಸ್ಕಾಂ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಪೆಟ್ರೋಲ್ , ಡೀಸಲ್, ಅಡುಗೆ ಅನಿಲ ಸೇರಿದಂತೆ ಪ್ರತಿಯೊಂದು ದಿನಬಳಕೆಯ ವಸ್ತುಗಳ ವಿಪರೀತ ಬೆಲೆ ಏರಿಕೆಗಳಿಂದ ತತ್ತರಿಸಿ ಹೋಗಿರುವ ರಾಜ್ಯದ ಜನರ ಮೇಲೆ ಈಗ ವಿದ್ಯುತ್ ದರವನ್ನು ಕೂಡ ಏರಿಕೆ ಮಾಡುವ ಮೂಲಕ ರಾಜ್ಯದ ಬಿಜೆಪಿ ಸರಕಾರವು ಜನರ ಗಾಯದ ಮೇಲೆ ಬರೆ ಎಳೆದು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ ಎಂದು ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆರೋಪಿಸಿದೆ.

ಗೃಹ ಬಳಕೆಯ ವಿದ್ಯುತ್ ದರದಲ್ಲಿ ಪ್ರತಿ ಯೂನಿಟಿಗೆ 20ರಿಂದ 30 ಪೈಸೆ ಹಾಗೂ ವಾಣಿಜ್ಯ ಬಳಕೆಯ ವಿದ್ಯುತ್ ದರಗಳ ಮೇಲೆ ಪ್ರತಿ ಯುನಿಟಿಗೆ 15ರಿಂದ 25 ಪೈಸೆ ಯಷ್ಟು ಏರಿಕೆ ಮಾಡಿ ಏಪ್ರಿಲ್ ಒಂದರಿಂದ ಜಾರಿಗೊಳಿಸಲು ಮುಂದಾಗಿದೆ. ಈಗಾಗಲೆ ಕಳೆದೆರಡು ವರುಷಗಳಿಂದ ಜನರ ಯಾವುದೇ ವಿರೋಧವನ್ನು ಪರಿಗಣನೆಗೆ ತೆಗೆದುಕೊಳ್ಳದೆ ನಿರಂತರ ವಿದ್ಯುತ್ ದರವನ್ನು ಏರಿಕೆಗೊಳಿಸಿದೆ. ಲಾಕ್ಡೌನ್ ನಂತರ ಜನ ತಮ್ಮ ಆದಾಯದ ಮೂಲಗಳೆಲ್ಲವನ್ನು ಕಳೆದುಕೊಂಡಿದ್ದಾರೆ. ಉದ್ಯೋಗ ಇಲ್ಲದೆ ಮತ್ತು ಇರುವ ಉದ್ಯೋಗಕ್ಕೆ ಸರಿಯಾದ ವೇತನವನ್ನು ಪಡೆಯಲಾಗದೆ ಸಂಕಷ್ಟದಲ್ಲಿದ್ದಾರೆ.

ಪೆಟ್ರೋಲ್ ಡೀಸೆಲ್ ನಿಂದ ಹಿಡಿದು ಅಡುಗೆ ಅನಿಲ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಗಳಿಂದ ಕಂಗೆಟ್ಟಿರುವ ಜನಸಾಮಾನ್ಯರು ಇದೀಗ ವಿದ್ಯುತ್ ದರ ಏರಿಕೆಯಿಂದ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದ್ದಾರೆ. ಈ ರೀತಿಯ ವಿಪರೀತ ಬೆಲೆ ಏರಿಕೆಯನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಈ ಹಿನ್ನಲೆಯಲ್ಲಿ  ವಿದ್ಯುತ್ ದರ ವಿಪರೀತ ಏರಿಕೆ ಮಾಡಿದ ರಾಜ್ಯ ಬಿಜೆಪಿ ಸರಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ ಹಾಗು ಏರಿಕೆ ಮಾಡಿದ ದರವನ್ನು ಕೂಡಲೇ ವಾಪಸ್ಸು ಪಡೆಯಲು ಒತ್ತಾಯಿಸಿ ಏಪ್ರಿಲ್ 11ರಂದು ಬೆಳಿಗ್ಗೆ 10 ಗಂಟೆಗೆ ನಗರದ ಬಿಜೈ ಬಳಿ ಇರುವ ಮೆಸ್ಕಾಂ ಕೇಂದ್ರ ಕಚೇರಿಗೆ ಡಿವೈಎಫ್ಐ, ಎಸ್ಎಫ್ಐ ಮತ್ತು ಜನವಾದಿ ಮಹಿಳಾ ಸಂಘಟನೆ ನೇತೃತ್ವದಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ ಎಂದು ಡಿವೈಎಫ್ಐ ದ.ಕ ಜಿಲ್ಲಾಧ್ಯಕ್ಷರಾದ ಬಿ. ಕೆ ಇಮ್ತಿಯಾಜ್ ಮತ್ತು ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು