11:06 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ವಿದ್ಯುತ್ ಖಾಸಗೀಕರಣದ ಮೂಲಕ ದೇಶವನ್ನೇ ಕತ್ತಲು ಮಾಡುವ ಹುನ್ನಾರ: ಸುನಿಲ್ ಕುಮಾರ್ ಬಜಾಲ್ ಆರೋಪ

02/11/2023, 23:08

ಮಂಗಳೂರು(reporterkarnataka.com): ವಿದ್ಯುತ್ ಕ್ಷೇತ್ರದಲ್ಲಿನ ಉತ್ಪಾದನೆ, ವಿತರಣೆ ಹಾಗೂ ಕಂದಾಯ ಆಕರಣೆ ಇದ್ಯಾವುದನ್ನೂ ಸರಕಾರ ಮಾಡಬಾರದು. ಅವೆಲ್ಲವನ್ನೂ ಖಾಸಗೀಯವರಿಗೆ ವಹಿಸಿ ಸರಕಾರ ತನ್ನ ಜವಾಬ್ದಾರಿಯಿಂದ ಮುಕ್ತವಾಗಬೇಕು ಎಂದು ಕೇಂದ್ರ ಸರಕಾರದ ಅಡಿಯಲ್ಲಿರುವ ನೀತಿ ಆಯೋಗ ಅತ್ಯಂತ ಸ್ಪಷ್ಟವಾಗಿ ಹೇಳಿರುವುದು, ದೇಶದ ಸಂಪತ್ತನ್ನು ಮಾರಲು ಹೊರಟ ಕೇಂದ್ರ ಸರಕಾರದ ಧೋರಣೆ ಏನೆಂಬುದು ಜಗಜ್ಜಾಹೀರಾಗಿದೆ. ವಿದ್ಯುತ್ ಕ್ಷೇತ್ರವನ್ನು ಸಂಪೂರ್ಣ ಖಾಸಗೀಕರಣಗೊಳಿಸುವ ಮೂಲಕ ಇಡೀ ದೇಶವನ್ನೇ ಕತ್ತಲು ಮಾಡಲು ಹೊರಟಿದೆ ಎಂದು ಸಿಐಟಿಯು ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಅವರು ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡರು.

ಕೇಂದ್ರ ಸರ್ಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು ಹಾಗೂ ವಿದ್ಯುತ್, ರೈಲ್ವೇ ಖಾಸಗೀಕರಣ ಮಾಡಲು ಹೊರಟ ಕೇಂದ್ರ ಸರಕಾರದ ಕಾರ್ಪೊರೇಟ್ ಪರ ನೀತಿಗಳನ್ನು ಖಂಡಿಸಿ ನವೆಂಬರ್ ತಿಂಗಳಲ್ಲಿ ದೇಶಾದ್ಯಂತ ನಡೆಯುವ ಪ್ರಚಾರಾಂದೋಲನದ ಭಾಗವಾಗಿ ಉಳ್ಳಾಲ ತಾಲೂಕು ಮಟ್ಟದ ವಾಹನ ಪ್ರಚಾರ ಜಾಥಾವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಾಥಾವನ್ನು ಉದ್ದೇಶಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕ್ರಷ್ಣಪ್ಪ ಸಾಲ್ಯಾನ್ ಅವರು ಮಾತನಾಡಿ, ದೇಶದ ಸಾರ್ವಜನಿಕ ಉದ್ದಿಮೆಗಳನ್ನು ರಾಷ್ಟ್ರೀಯ ನಗದೀಕರಣ ಪೈಪ್ ಲೈನ್ ಯೋಜನೆ ಅಡಿಯಲ್ಲಿ ದೈತ್ಯ ಕಾರ್ಪೊರೇಟ್ ಕಂಪೆನಿಗಳಿಗೆ ಹಸ್ತಾಂತರಿಸುವ ಪ್ರಕ್ರಿಯೆ ಶರವೇಗದಲ್ಲಿದೆ. ವಿಮಾನ ನಿಲ್ದಾಣ, ಹೆದ್ದಾರಿಗಳು, ಬಂದರುಗಳು, ರೈಲ್ವೇ, ವಿದ್ಯುತ್, ಶಿಕ್ಷಣ, ಬ್ಯಾಂಕುಗಳು ಹಾಗೂ ರಕ್ಷಣಾ ವಲಯಗಳನ್ನು ಖಾಸಗೀಕರಣದ ಕಬಂಧಬಾಹುಗಳಲ್ಲಿ ಬಂಧಿಸಲಾಗಿದೆ ಎಂದು ಹೇಳಿದರು.
ಜಾಥಾ ಕಾರ್ಯಕ್ರಮದಲ್ಲಿ ಸಿಐಟಿಯು ಜಿಲ್ಲಾ ನಾಯಕರಾದ ಯು.ಜಯಂತ ನಾಯಕ್, ಪದ್ಮಾವತಿ ಶೆಟ್ಟಿ, ರೋಹಿದಾಸ್, ಇಬ್ರಾಹಿಂ ಮದಕ, ಸುಂದರ ಕುಂಪಲ, ಮಹಮ್ಮದ್ ಅನ್ಸಾರ್ , ನಾರಾಯಣ ತಲಪಾಡಿ, ಜಯಂತ ಅಂಬ್ಲಮೊಗರು ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು