12:01 AM Friday9 - January 2026
ಬ್ರೇಕಿಂಗ್ ನ್ಯೂಸ್
ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ…

ಇತ್ತೀಚಿನ ಸುದ್ದಿ

ವಿದ್ಯುತ್ ಖಾಸಗೀಕರಣ: ತೊಕ್ಕೊಟ್ಟು, ಕೈಕಂಬ ಹಾಗೂ ಮಂಗಳೂರಿನ ಮೆಸ್ಕಾಂ ಪ್ರಧಾನ ಕಚೇರಿ ಎದುರು ಪ್ರತಿಭಟನೆ

08/11/2023, 18:28

ಮಂಗಳೂರು(reporterkarnataka.com): ಆಧುನಿಕ ನಾಗರಿಕ ಸಮಾಜದ ಕೇಂದ್ರ ನರಮಂಡಲದಂತೆ ಕಾರ್ಯನಿರ್ವಹಿಸುವ ಹಾಗೂ ಎಲ್ಲಾ ಕೈಗಾರಿಕೆಗಳ ತಾಯಿಯಂತಿರುವ ಅತ್ಯಂತ ಪ್ರಮುಖ ಸೇವೆಯಾದ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿರುವ ನರೇಂದ್ರ ಮೋದಿ ಸರಕಾರದ ಕಾರ್ಪೊರೇಟ್ ಪರ ನೀತಿಯನ್ನು ವಿರೋಧಿಸಿ ದೇಶಾದ್ಯಂತ ನಡೆದ ಹೋರಾಟದ ಭಾಗವಾಗಿ ಮಂಗಳೂರಿನ ಬಿಜೈಯಲ್ಲಿರುವ ಮೆಸ್ಕಾಂ ಪ್ರಧಾನ ಕಚೇರಿ, ತೊಕ್ಕೋಟು ಹಾಗೂ ಗುರುಪುರ ಕೈಕಂಬ ಮೆಸ್ಕಾಂ ಕಚೇರಿಯೆದುರು ರೈತ ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ಜಂಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಆಕ್ರೋಶಭರಿತರಾಗಿ ಘೋಷಣೆಗಳನ್ನು ಕೂಗಿದರು.
ಮಂಗಳೂರಿನಲ್ಲಿ ಜರುಗಿದ ಪ್ರತಿಭಟನೆಯನ್ನುದ್ದೇಶಿಸಿ ಸುನಿಲ್ ಕುಮಾರ್ ಬಜಾಲ್, ಎಚ್ ವಿ.ರಾವ್, ಯಾದವ ಶೆಟ್ಟಿ, ಯೋಗೀಶ್ ಜಪ್ಪಿನಮೊಗರು, ಸೀತಾರಾಮ ಬೇರಿಂಜ, ಜಯಂತಿ ಶೆಟ್ಟಿ, ಸಂತೋಷ್ ಬಜಾಲ್, ಎಂ.ದೇವದಾಸ್ ಅವರು ಮಾತನಾಡಿದರೆ, ಗುರುಪುರ ಕೈಕಂಬದಲ್ಲಿ ಜರುಗಿದ ಪ್ರತಿಭಟನೆಯನ್ನುದ್ದೇಶಿಸಿ ಮುನೀರ್ ಕಾಟಿಪಳ್ಳ, ಸದಾಶಿವದಾಸ್, ನೋಣಯ್ಯ ಗೌಡ, ಮನೋಜ್ ವಾಮಂಜೂರು‌ ಅವರು ಮಾತನಾಡಿದರು. ತೊಕ್ಕೊಟುನಲ್ಲಿ ಜರುಗಿದ ಪ್ರತಿಭಟನೆಯನ್ನುದ್ದೇಶಿಸಿ ಜೆ.ಬಾಲಕೃಷ್ಣ ಶೆಟ್ಟಿ, ಸುಕುಮಾರ್ ತೊಕ್ಕೋಟು, ಜಯಂತ ನಾಯಕ್, ಕ್ರಷ್ಣಪ್ಪ ಸಾಲ್ಯಾನ್, ರೋಹಿದಾಸ್ ಭಟ್ನಗರರವರು ಮಾತನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು