5:22 AM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ವಿದ್ಯುತ್ ಖಾಸಗೀಕರಣ: ತೊಕ್ಕೊಟ್ಟು, ಕೈಕಂಬ ಹಾಗೂ ಮಂಗಳೂರಿನ ಮೆಸ್ಕಾಂ ಪ್ರಧಾನ ಕಚೇರಿ ಎದುರು ಪ್ರತಿಭಟನೆ

08/11/2023, 18:28

ಮಂಗಳೂರು(reporterkarnataka.com): ಆಧುನಿಕ ನಾಗರಿಕ ಸಮಾಜದ ಕೇಂದ್ರ ನರಮಂಡಲದಂತೆ ಕಾರ್ಯನಿರ್ವಹಿಸುವ ಹಾಗೂ ಎಲ್ಲಾ ಕೈಗಾರಿಕೆಗಳ ತಾಯಿಯಂತಿರುವ ಅತ್ಯಂತ ಪ್ರಮುಖ ಸೇವೆಯಾದ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿರುವ ನರೇಂದ್ರ ಮೋದಿ ಸರಕಾರದ ಕಾರ್ಪೊರೇಟ್ ಪರ ನೀತಿಯನ್ನು ವಿರೋಧಿಸಿ ದೇಶಾದ್ಯಂತ ನಡೆದ ಹೋರಾಟದ ಭಾಗವಾಗಿ ಮಂಗಳೂರಿನ ಬಿಜೈಯಲ್ಲಿರುವ ಮೆಸ್ಕಾಂ ಪ್ರಧಾನ ಕಚೇರಿ, ತೊಕ್ಕೋಟು ಹಾಗೂ ಗುರುಪುರ ಕೈಕಂಬ ಮೆಸ್ಕಾಂ ಕಚೇರಿಯೆದುರು ರೈತ ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ಜಂಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಆಕ್ರೋಶಭರಿತರಾಗಿ ಘೋಷಣೆಗಳನ್ನು ಕೂಗಿದರು.
ಮಂಗಳೂರಿನಲ್ಲಿ ಜರುಗಿದ ಪ್ರತಿಭಟನೆಯನ್ನುದ್ದೇಶಿಸಿ ಸುನಿಲ್ ಕುಮಾರ್ ಬಜಾಲ್, ಎಚ್ ವಿ.ರಾವ್, ಯಾದವ ಶೆಟ್ಟಿ, ಯೋಗೀಶ್ ಜಪ್ಪಿನಮೊಗರು, ಸೀತಾರಾಮ ಬೇರಿಂಜ, ಜಯಂತಿ ಶೆಟ್ಟಿ, ಸಂತೋಷ್ ಬಜಾಲ್, ಎಂ.ದೇವದಾಸ್ ಅವರು ಮಾತನಾಡಿದರೆ, ಗುರುಪುರ ಕೈಕಂಬದಲ್ಲಿ ಜರುಗಿದ ಪ್ರತಿಭಟನೆಯನ್ನುದ್ದೇಶಿಸಿ ಮುನೀರ್ ಕಾಟಿಪಳ್ಳ, ಸದಾಶಿವದಾಸ್, ನೋಣಯ್ಯ ಗೌಡ, ಮನೋಜ್ ವಾಮಂಜೂರು‌ ಅವರು ಮಾತನಾಡಿದರು. ತೊಕ್ಕೊಟುನಲ್ಲಿ ಜರುಗಿದ ಪ್ರತಿಭಟನೆಯನ್ನುದ್ದೇಶಿಸಿ ಜೆ.ಬಾಲಕೃಷ್ಣ ಶೆಟ್ಟಿ, ಸುಕುಮಾರ್ ತೊಕ್ಕೋಟು, ಜಯಂತ ನಾಯಕ್, ಕ್ರಷ್ಣಪ್ಪ ಸಾಲ್ಯಾನ್, ರೋಹಿದಾಸ್ ಭಟ್ನಗರರವರು ಮಾತನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು