4:30 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ವಿದ್ಯುತ್ ಶಾಕ್‌ನಿಂದ ಸಣ್ಣ ಉದ್ಯಮಗಳು ವಲಸೆ: ಶಾಸಕ ಡಾ.ಭರತ್ ಶೆಟ್ಟಿ

13/06/2023, 16:06

ಸುರತ್ಕಲ್(reporterkarnataka.com): ಕಾಂಗ್ರೆಸ್ ತಾನು ಕೊಟ್ಟ ಮಾತು ಉಳಿಸಿಕೊಳ್ಳಲು ಗ್ಯಾರಂಟಿ ಜಾರಿ ಮಾಡಿ ಸಣ್ಣ ಉದ್ಯಮಗಳಿಗೆ ಹೊಡೆತ ನೀಡಿದೆ. ಬಹುತೇಕ ಸಣ್ಣ ಪುಟ್ಟ ಕಂಪನಿಗಳು ನಷ್ಟ ಭೀತಿಯಿಂದ ಮಹಾರಾಷ್ಟ್ರ,ಕೇರಳ ಸಹಿತ ಗಡಿ ಭಾಗದ ರಾಜ್ಯಗಳಿಗೆ ಸ್ಥಳಾಂತರಗೊಳ್ಳುವ ಭೀತಿ ಎದುರಾಗಿದೆ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿವೈ ಆರೋಪಿಸಿದ್ದಾರೆ.
ಶೇ. 30-40ರಷ್ಟು ವಾಣಿಜ್ಯ ವಿದ್ಯುತ್ ದರ ಏರಿಕೆ ಉದ್ಯಮಿಗಳಲ್ಲಿ ಆಘಾತ ಉಂಟುಮಾಡಿದೆ. ಸ್ಪರ್ಧಾತ್ಮಕ ವ್ಯವಹಾರದ ನಡುವೆ ‘ಉತ್ಪಾದನಾ ವೆಚ್ಚ ಹೆಚ್ಚಾಗಿ ಅನ್ಯ ರಾಜ್ಯಗಳ ಪೈಪೋಟಿ ಎದುರಿಸಲು ಕಷ್ಟವಾಗುತ್ತದೆ. ಸಾವಿರಾರು ಮಂದಿ ಉದ್ಯೋಗ ಕಳೆದುಕೊಳ್ಳುವ ಆತಂಕವಿದೆ. ನಷ್ಟದಿಂದ ಪಾರಾಗಲು ಕಂಪನಿಗಳ ಅನ್ಯ ರಾಜ್ಯದತ್ತಾ ವಲಸೆ ಯತ್ನ ಆರಂಭವಾಗಿದೆ.
ಅಧಿಕಾರದ ಲಾಲಸೆಯಿಂದ ಗಂಭೀರ ಪರಿಣಾಮಗಳ ಬಗ್ಗೆ ಯೋಚಿಸದೆ ಹಿರಿಯ ಆಧಿಕಾರಿಗಳ ಮೇಲೆ ಒತ್ತಡ ಬೀರಿ ಗ್ಯಾರಂಟಿ ಜಾರಿ ಮಾಡುತ್ತಿರುವ ಈ ಸರಕಾರದ ನಿರ್ಧಾರದಿಂದ ಸಾಮಾನ್ಯ ಜನರೇ ಸಂಕಷ್ಟಕ್ಕೀಡಾಗಲಿದ್ದಾರೆ ಎಂದು ಡಾ.ಭರತ್ ಶೆಟ್ಟಿ ಆತಂಕ ವ್ಯಕ್ತ ಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು