12:19 PM Sunday22 - June 2025
ಬ್ರೇಕಿಂಗ್ ನ್ಯೂಸ್
Bagalkote | ಪಟ್ಟದಕಲ್ಲು ವಿಶ್ವ ಪರಂಪರೆ ತಾಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… Udupi | ನೈತಿಕ ಪಾಠ ಶಾಸಕ ಸುನಿಲ್ ಕುಮಾರ್ ಹೇಳಿ ಕೊಡಬೇಕಿಲ್ಲ: ಸಚಿವೆ… ಜಿಲ್ಲಾಸ್ಪತ್ರೆಗಳು, ಆರೋಗ್ಯ ಕೇಂದ್ರಗಳಲ್ಲಿ ಯೋಗ ಮಂದಿರ ಸ್ಥಾಪನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪಾಲಿಕೆ ಮೇಲೆ ಲೋಕಾಯುಕ್ತ ದಾಳಿ: ಕಂದಾಯ, ಆರೋಗ್ಯ ಹಾಗೂ ಎಂಜಿನಿಯರಿಂಗ್ ವಿಭಾಗಗಳ ತೀವ್ರ… Bangalore | ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ: ರಾಜ್ಯಾದ್ಯಂತ ಪರಿಸರ… Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ

ಇತ್ತೀಚಿನ ಸುದ್ದಿ

ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ

19/10/2024, 19:38

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ತಲಪಾಡಿಯ ದೇವಿ ನಗರದಲ್ಲಿರುವ ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಸಂಬಂಧಿತ ವಿದ್ಯಾಭಾರತಿ ಕರ್ನಾಟಕ ಮತ್ತು ಶಾರದಾ ಸಮೂಹ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ನಲ್ಲಿ ಪ್ರಾಂತ್ಯ ಮತ್ತು ಕ್ಷೇತ್ರ ಮಟ್ಟದ ವಿಜ್ಞಾನ ಮೇಳ ಅಕ್ಟೋಬರ್ 16, 17,18ರಂದು ನಡೆಯಿತು. ಈ ಪ್ರಾಂತ್ಯ ಮಟ್ಟದ ವಿಜ್ಞಾನ ಮೇಳದಲ್ಲಿ ಸೊಪ್ಪು ಗುಡ್ಡೆಯಲ್ಲಿ ಇರುವ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಸೇವಾ ಭಾರತಿಯ 7ನೇ ತರಗತಿ ವಿದ್ಯಾರ್ಥಿ ನಹುಷ್ ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಪ್ರಥಮ ಸ್ಥಾನ ಪಡೆದು ಕ್ಷೇತ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.


ಈ ಪ್ರತಿಭಾನ್ವಿತ ವಿದ್ಯಾರ್ಥಿಯು ಕುರುವಳ್ಳಿಯ ನಾಗರತ್ನ ಹಾಗೂ ದಯಾನಂದ ದಂಪತಿಯ ಪುತ್ರ. ಕ್ಷೇತ್ರ ಮಟ್ಟದ ಸ್ಪರ್ಧೆಯು ಇದೇ ತಿಂಗಳ 19, 20 ರಂದು ತಲಪಾಡಿಯ ಶಾರದಾ ವಿದ್ಯಾ ಸಂಸ್ಥೆಯಲ್ಲಿಯೇ ನಡೆಯಲಿದೆ.ಕ್ಷೇತ್ರ ಮಟ್ಟದಲ್ಲಿಯೂ ಗೆದ್ದು ರಾಷ್ಟ್ರದ ಮಟ್ಟಕ್ಕೆ ಆಯ್ಕೆಯಾಗಲಿ ಎಂದು ಸೇವಾ ಭಾರತಿ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದ ಶುಭ ಹಾರೈಸಿ ಅಭಿನಂದಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು