1:55 PM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ

19/10/2024, 19:38

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ತಲಪಾಡಿಯ ದೇವಿ ನಗರದಲ್ಲಿರುವ ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಸಂಬಂಧಿತ ವಿದ್ಯಾಭಾರತಿ ಕರ್ನಾಟಕ ಮತ್ತು ಶಾರದಾ ಸಮೂಹ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ನಲ್ಲಿ ಪ್ರಾಂತ್ಯ ಮತ್ತು ಕ್ಷೇತ್ರ ಮಟ್ಟದ ವಿಜ್ಞಾನ ಮೇಳ ಅಕ್ಟೋಬರ್ 16, 17,18ರಂದು ನಡೆಯಿತು. ಈ ಪ್ರಾಂತ್ಯ ಮಟ್ಟದ ವಿಜ್ಞಾನ ಮೇಳದಲ್ಲಿ ಸೊಪ್ಪು ಗುಡ್ಡೆಯಲ್ಲಿ ಇರುವ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಸೇವಾ ಭಾರತಿಯ 7ನೇ ತರಗತಿ ವಿದ್ಯಾರ್ಥಿ ನಹುಷ್ ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಪ್ರಥಮ ಸ್ಥಾನ ಪಡೆದು ಕ್ಷೇತ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.


ಈ ಪ್ರತಿಭಾನ್ವಿತ ವಿದ್ಯಾರ್ಥಿಯು ಕುರುವಳ್ಳಿಯ ನಾಗರತ್ನ ಹಾಗೂ ದಯಾನಂದ ದಂಪತಿಯ ಪುತ್ರ. ಕ್ಷೇತ್ರ ಮಟ್ಟದ ಸ್ಪರ್ಧೆಯು ಇದೇ ತಿಂಗಳ 19, 20 ರಂದು ತಲಪಾಡಿಯ ಶಾರದಾ ವಿದ್ಯಾ ಸಂಸ್ಥೆಯಲ್ಲಿಯೇ ನಡೆಯಲಿದೆ.ಕ್ಷೇತ್ರ ಮಟ್ಟದಲ್ಲಿಯೂ ಗೆದ್ದು ರಾಷ್ಟ್ರದ ಮಟ್ಟಕ್ಕೆ ಆಯ್ಕೆಯಾಗಲಿ ಎಂದು ಸೇವಾ ಭಾರತಿ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದ ಶುಭ ಹಾರೈಸಿ ಅಭಿನಂದಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು