3:45 AM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ

19/10/2024, 19:38

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ತಲಪಾಡಿಯ ದೇವಿ ನಗರದಲ್ಲಿರುವ ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಸಂಬಂಧಿತ ವಿದ್ಯಾಭಾರತಿ ಕರ್ನಾಟಕ ಮತ್ತು ಶಾರದಾ ಸಮೂಹ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ನಲ್ಲಿ ಪ್ರಾಂತ್ಯ ಮತ್ತು ಕ್ಷೇತ್ರ ಮಟ್ಟದ ವಿಜ್ಞಾನ ಮೇಳ ಅಕ್ಟೋಬರ್ 16, 17,18ರಂದು ನಡೆಯಿತು. ಈ ಪ್ರಾಂತ್ಯ ಮಟ್ಟದ ವಿಜ್ಞಾನ ಮೇಳದಲ್ಲಿ ಸೊಪ್ಪು ಗುಡ್ಡೆಯಲ್ಲಿ ಇರುವ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಸೇವಾ ಭಾರತಿಯ 7ನೇ ತರಗತಿ ವಿದ್ಯಾರ್ಥಿ ನಹುಷ್ ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಪ್ರಥಮ ಸ್ಥಾನ ಪಡೆದು ಕ್ಷೇತ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.


ಈ ಪ್ರತಿಭಾನ್ವಿತ ವಿದ್ಯಾರ್ಥಿಯು ಕುರುವಳ್ಳಿಯ ನಾಗರತ್ನ ಹಾಗೂ ದಯಾನಂದ ದಂಪತಿಯ ಪುತ್ರ. ಕ್ಷೇತ್ರ ಮಟ್ಟದ ಸ್ಪರ್ಧೆಯು ಇದೇ ತಿಂಗಳ 19, 20 ರಂದು ತಲಪಾಡಿಯ ಶಾರದಾ ವಿದ್ಯಾ ಸಂಸ್ಥೆಯಲ್ಲಿಯೇ ನಡೆಯಲಿದೆ.ಕ್ಷೇತ್ರ ಮಟ್ಟದಲ್ಲಿಯೂ ಗೆದ್ದು ರಾಷ್ಟ್ರದ ಮಟ್ಟಕ್ಕೆ ಆಯ್ಕೆಯಾಗಲಿ ಎಂದು ಸೇವಾ ಭಾರತಿ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದ ಶುಭ ಹಾರೈಸಿ ಅಭಿನಂದಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು