1:27 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ವಿಜಯನಗರ ಜಿಲ್ಲಾ ಶಿಳ್ಳೇಕ್ಯಾತರ ಮಹಿಳಾ ಕ್ಷೇಮಾಭಿವೃದ್ಧಿ ಸಂಘ ಅಸ್ತಿತ್ವಕ್ಕೆ: ಗೌರಮ್ಮ ನೂತನ ಅಧ್ಯಕ್ಷೆ

21/09/2021, 08:58

ವಿ.ಜಿ.ವೃಷಭೇಂದ್ರ  ಕೂಡ್ಲಿಗಿ ವಿಜಯನಗರ 

info.reporterkarnataka@gmail.com

ಜಿಲ್ಲೆಯ ಶಿಳ್ಳೇಕ್ಯಾತರ ನೂತನ ಮಹಿಳಾ ಕ್ಷೇಮಾಭಿವೃದ್ಧಿ ಸಂಘ ಅಸ್ಥಿತ್ವಕ್ಕೆ ಬಂದಿದ್ದು,ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ  ರಾಜ್ಯ ಮುಖಂಡರ ಉಪಸ್ಥಿತಿಯಲ್ಲಿ ಜರುಗಿದ ಸಭೆಯಲ್ಲಿ ನೂತನ ಸಂಘದ ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. 

ವಿಜಯನಗರ ಜಿಲ್ಲಾಧ್ಯಕ್ಷರಾಗಿ ಕೂಡ್ಲಿಗಿ ಪಟ್ಟಣದ ಬಿದಿಬದಿ ವ್ಯಾಪಾರಿ ಗೌರಮ್ಮ ಮಹಂತೇಶ ಸಿಂದೆರನ್ನು ಆಯ್ಕೆಮಾಡಲಾಯಿತು. ಉಪಾಧ್ಯಕ್ಷೆ ಹನುಮಕ್ಕ, ಪ್ರಧಾನ ಕಾರ್ಯದರ್ಶಿ ಅಲಿಗಿಲಿವಾಡ ರೂಪ, ಸಂಘಟನಾ ಕಾರ್ಯದರ್ಶಿ ಕೊಟ್ಟೂರು ಕವಿತಾ, ಕೋಶಾಧ್ಯಕ್ಷರು ನಾಗರಕಟ್ಟೆ ಮಹಾದೇವಮ್ಮ, ದೀಪಾ, ಗಾಳೆಮ್ಮಗುಡಿ ಉಮಾದೇವಿ ಅವರನ್ನು ಸಭೆಯಲ್ಲಿ ಅಯ್ಕೆ ಮಾಡಲಾಯಿತು. ಸಂಘದ ಗೌರವಾಧ್ಯಕ್ಷರು ಮಹೇಂದ್ರ ರಾವ್ ಸಾಸನಿಕ್ ಅವರನ್ನು ನೇಮಿಸಲಾಯಿತು.

ಕಾರ್ಯಕ್ರಮದ ಸಾನಿಧ್ಯವನ್ನು ಶಿಳ್ಳೇಕ್ಯಾತ ಸ್ವಾಮೀಜಿ ಶ್ರೀಕಲ್ಲಿನಾಥ ಮಹಾಸ್ವಾಮಿ ಭೀಮಘಡ ಹಾಗೂ ಬಡೇಲಡಕು ಶ್ರೀವಸಂತಪ್ಪತಾತ ರವು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯಧ್ಯಕ್ಷ ಡಾ. ಸಣ್ಣ ದೊಡ್ಮನಿ,ರಾಜ್ಯ ಕಾರ್ಯದರ್ಶಿ ಗಂಗೂರು ಮತ್ತಣ್ಣವಾಯ್, ರಾಜ್ಯಉಪಾಧ್ಯಕ್ಷ ಸುರೇಶ್ ವಾಯ್ ಕಟ್ಟಿಮನಿ, ಪ್ರಧಾನ ಕಾರ್ಯದರ್ಶಿಗಳಾದ ಅಶೋಕ ಶಿಳ್ಳೆಕ್ಯಾತರ ,ರಾಜ್ಯ ಸಂಚಾಲಕ ವಿಲಾಸಕುಮಾರ ಜಿ.ಶಿಂಧೆ,ರಾಜ್ಯ ಸಂಘಟನಾ ಕಾರ್ಯದರ್ಶಿ ಶ್ರೀಮತಿ ಶೈಲಾ ಸೀತಾರಾಂ ಪಾಚಂಗೆ ಮತ್ತಿರರು ವೇದಿಕೆಯಲ್ಲಿದ್ದರು. ತೊಗಲುಗೊಂಬೆ ಕಲಾವಿದರಾದ ಬಡೇಲಡಕು ತಿಪ್ಪೇಸ್ವಾಮಿ ಹಾಗೂ ತಬಲಸಾತಿ ವೆಂಕಟೇಶ್ ಕಟ್ಟಿಮನಿ ಪ್ರಾರ್ಥಿಸಿದರು. ಮುತ್ತಣ್ಣ ವಾಯ್ ಕಟ್ಟಿಮನಿ ನಿರೂಪಿಸಿದರು,ಕೂಡ್ಲಿಗಿ ಮಂಜು ಸಿಂದೆ ಸ್ವಾಗತಿಸಿದರು, ಬಡೇಲಡಕು ವಿರುಪಾಕ್ಷಪ್ಪ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು