4:51 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ವಿಜಯನಗರ ಜಿಲ್ಲಾ ಶಿಳ್ಳೇಕ್ಯಾತರ ಮಹಿಳಾ ಕ್ಷೇಮಾಭಿವೃದ್ಧಿ ಸಂಘ ಅಸ್ತಿತ್ವಕ್ಕೆ: ಗೌರಮ್ಮ ನೂತನ ಅಧ್ಯಕ್ಷೆ

21/09/2021, 08:58

ವಿ.ಜಿ.ವೃಷಭೇಂದ್ರ  ಕೂಡ್ಲಿಗಿ ವಿಜಯನಗರ 

info.reporterkarnataka@gmail.com

ಜಿಲ್ಲೆಯ ಶಿಳ್ಳೇಕ್ಯಾತರ ನೂತನ ಮಹಿಳಾ ಕ್ಷೇಮಾಭಿವೃದ್ಧಿ ಸಂಘ ಅಸ್ಥಿತ್ವಕ್ಕೆ ಬಂದಿದ್ದು,ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ  ರಾಜ್ಯ ಮುಖಂಡರ ಉಪಸ್ಥಿತಿಯಲ್ಲಿ ಜರುಗಿದ ಸಭೆಯಲ್ಲಿ ನೂತನ ಸಂಘದ ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. 

ವಿಜಯನಗರ ಜಿಲ್ಲಾಧ್ಯಕ್ಷರಾಗಿ ಕೂಡ್ಲಿಗಿ ಪಟ್ಟಣದ ಬಿದಿಬದಿ ವ್ಯಾಪಾರಿ ಗೌರಮ್ಮ ಮಹಂತೇಶ ಸಿಂದೆರನ್ನು ಆಯ್ಕೆಮಾಡಲಾಯಿತು. ಉಪಾಧ್ಯಕ್ಷೆ ಹನುಮಕ್ಕ, ಪ್ರಧಾನ ಕಾರ್ಯದರ್ಶಿ ಅಲಿಗಿಲಿವಾಡ ರೂಪ, ಸಂಘಟನಾ ಕಾರ್ಯದರ್ಶಿ ಕೊಟ್ಟೂರು ಕವಿತಾ, ಕೋಶಾಧ್ಯಕ್ಷರು ನಾಗರಕಟ್ಟೆ ಮಹಾದೇವಮ್ಮ, ದೀಪಾ, ಗಾಳೆಮ್ಮಗುಡಿ ಉಮಾದೇವಿ ಅವರನ್ನು ಸಭೆಯಲ್ಲಿ ಅಯ್ಕೆ ಮಾಡಲಾಯಿತು. ಸಂಘದ ಗೌರವಾಧ್ಯಕ್ಷರು ಮಹೇಂದ್ರ ರಾವ್ ಸಾಸನಿಕ್ ಅವರನ್ನು ನೇಮಿಸಲಾಯಿತು.

ಕಾರ್ಯಕ್ರಮದ ಸಾನಿಧ್ಯವನ್ನು ಶಿಳ್ಳೇಕ್ಯಾತ ಸ್ವಾಮೀಜಿ ಶ್ರೀಕಲ್ಲಿನಾಥ ಮಹಾಸ್ವಾಮಿ ಭೀಮಘಡ ಹಾಗೂ ಬಡೇಲಡಕು ಶ್ರೀವಸಂತಪ್ಪತಾತ ರವು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯಧ್ಯಕ್ಷ ಡಾ. ಸಣ್ಣ ದೊಡ್ಮನಿ,ರಾಜ್ಯ ಕಾರ್ಯದರ್ಶಿ ಗಂಗೂರು ಮತ್ತಣ್ಣವಾಯ್, ರಾಜ್ಯಉಪಾಧ್ಯಕ್ಷ ಸುರೇಶ್ ವಾಯ್ ಕಟ್ಟಿಮನಿ, ಪ್ರಧಾನ ಕಾರ್ಯದರ್ಶಿಗಳಾದ ಅಶೋಕ ಶಿಳ್ಳೆಕ್ಯಾತರ ,ರಾಜ್ಯ ಸಂಚಾಲಕ ವಿಲಾಸಕುಮಾರ ಜಿ.ಶಿಂಧೆ,ರಾಜ್ಯ ಸಂಘಟನಾ ಕಾರ್ಯದರ್ಶಿ ಶ್ರೀಮತಿ ಶೈಲಾ ಸೀತಾರಾಂ ಪಾಚಂಗೆ ಮತ್ತಿರರು ವೇದಿಕೆಯಲ್ಲಿದ್ದರು. ತೊಗಲುಗೊಂಬೆ ಕಲಾವಿದರಾದ ಬಡೇಲಡಕು ತಿಪ್ಪೇಸ್ವಾಮಿ ಹಾಗೂ ತಬಲಸಾತಿ ವೆಂಕಟೇಶ್ ಕಟ್ಟಿಮನಿ ಪ್ರಾರ್ಥಿಸಿದರು. ಮುತ್ತಣ್ಣ ವಾಯ್ ಕಟ್ಟಿಮನಿ ನಿರೂಪಿಸಿದರು,ಕೂಡ್ಲಿಗಿ ಮಂಜು ಸಿಂದೆ ಸ್ವಾಗತಿಸಿದರು, ಬಡೇಲಡಕು ವಿರುಪಾಕ್ಷಪ್ಪ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು