4:20 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ವಿಜಯ ಸಂಕಲ್ಪ ಟ್ರೋಫಿ: ಶಾಸಕ ಡಾ. ಭರತ್ ಶೆಟ್ಟಿ ಉಪಸ್ಥಿತಿ; 48 ವಾಲಿಬಾಲ್ ತಂಡಗಳು ಭಾಗಿ

22/02/2023, 09:22

ಸುರತ್ಕಲ್(reporterkarnataka.com):
ಶಾಸಕ ಡಾ. ವೈ ಭರತ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಕೇಸರಿ ಸಾಗರದ ವಿರಾಟ್ ಶಕ್ತಿ‌ ಪ್ರದರ್ಶನವಾದಂತೆ ಕಂಡ ವಿಜಯ ಸಂಕಲ್ಪ ಟ್ರೋಫಿ ನಭೂತೋ ನಭವಿಷ್ಯತಿ ಎಂಬಂತೆ ಅತ್ಯಂತ ಯಶಸ್ವಿಯಾಗಿ‌ ಜರುಗಿತು.

ಪಂದ್ಯಾಕೂಟವನ್ನು ಪಕ್ಷದ ಹಿರಿಯರ ಸಮ್ಮುಖದಲ್ಲಿ ಉದ್ಘಾಟಿಸಲಾಯಿತು.
ಮಹಾಶಕ್ತಿ ಕೇಂದ್ರದ ಮುಖಂಡರ ಸಮರ್ಥ ಮುಂದಾಳತ್ವದಲ್ಲಿ ಇಂಟರ್ ಶಕ್ತಿ ಕೇಂದ್ರ ಮಟ್ಟದ 48 ವಾಲಿಬಾಲ್ ತಂಡಗಳು‌ ಬಿರುಸಿನ ಸ್ಪರ್ಧೆಯನ್ನು ನೀಡಿದವು.


ನಾರಳಪದವಿನ ಆಳ್ವಾಸ್ ಕ್ರೀಡಾಂಗಣದಲ್ಲಿ ಹೊನಲು ಬೆಳಕಿನಲ್ಲಿ ನಡೆದ ಪಂದ್ಯಾಟಗಳು ಭಾಜಪಾ‌ ಕಾರ್ಯಕರ್ತರಲ್ಲಿ‌ ಕ್ರೀಡಾಸ್ಫೂರ್ತಿಯನ್ನು ತುಂಬಿದವು. ಭಾರತೀಯ ಜನತಾ ಪಾರ್ಟಿಯ ಹಿರಿಯರು, ಬೂತ್ ಅದ್ಯಕ್ಷರು, ಕಾರ್ಯದರ್ಶಿ,ಶಕ್ತಿ ಕೇಂದ್ರ ಪ್ರಮುಖ್, ಸಹ ಪ್ರಮುಖ್, ಮಂಡಲ ಪದಾಧಿಕಾರಿಗಳು, ಜನಪ್ರತಿನಿಧಿ ಗಳನ್ನು ಗೌರವಿಸಲಾಯಿತು.
ಉತ್ತರ ಮಂಡಲ‌ ಅಧ್ಯಕ್ಷರಾದ ತಿಲಕರಾಜ್ ಕೃಷ್ಣಾಪುರ, ಪ್ರಮುಖರಾದ ಕಸ್ತೂರಿ ಪಂಜ, ಪಕ್ಷದ ವಿವಿಧ ಮೋರ್ಚಾಗಳ ಮುಖಂಡರು, ಗಣ್ಯರು, ಕಾರ್ಯಕರ್ತರು, ನಾಗರಿಕರು ‌ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು