12:03 AM Friday9 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ವಿಜಯನಗರ ಪೂಜಾರಹಳ್ಳಿ ತಾಂಡ: ಸರಕಾರಿ ಶಾಲೆಯಲ್ಲಿ ಮಕ್ಕಳಿಗೆ ಗಾರೆ ಪಾಠ.!?

17/05/2022, 19:54

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ತಾಲೂಕು ಪೂಜಾರಹಳ್ಳಿ ತಾಂಡದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ, ಮೇ17ರಂದು ಕೆಲ ಮಕ್ಕಳನ್ನು ಬಳಸಿ ಶಾಲೆ ಸ್ವಚ್ಚತೆ ಮಾಡಿಸಲಾಗಿದೆ. ಶಾಲಾ ಕೊಠಡಿಯ ಮೇಲೆ ಮಕ್ಕಳನ್ನು ಹತ್ತಿಸಿ ಮಾಳಿಗಿ ಮೇಲ್ಭಾಗದಲ್ಲಿದ್ದ, ಭಾರೀ ಗಾತ್ರದ ಸಿಮೆಂಟ್ ತ್ಯಾಜ್ಯದ ಗುಪ್ಪೆಯನ್ನು ತೆರವುಗೊಳಿಸಲು ಮಕ್ಕಳನ್ನು ಬಳಸಲಾಗಿದೆ.   ಮಕ್ಕಳನ್ನು ಕಟ್ಟಡದ ಮೇಲ್ಭಾಗದ ಚಾವಣೆ ಮೇಲೆ ಹತ್ತಲು ತಿಳಿಸಿದ್ದು, ಕಸ ಹಾಗೂ ತ್ಯಾಜ್ಯ ನೀರು ಮತ್ತು ಸಿಮೆಂಟ್ ತ್ಯಾಜ್ಯವನ್ನು ಕೀಳಲು ಸೂಚಿಸಿದ್ದಾರೆ.

ತ್ಯಾಜ್ಯ ತೆಗೆಯಲು ತಾಸು ಗಟ್ಟಲೆ ಮಕ್ಕಳಿಗೆ ಸಾಮಾಗ್ರಿಗಳನ್ನು ನೀಡಿ ತಾಸುಗಟ್ಟಲೆ ಕೆಲಸ ಮಾಡಿಸಲಾಗಿದೆ. ಶಾಲಾ ಬಿಸಿಯೂಟ ಕೋಣೆಯ ಮೇಲ್ಭಾಗದಲ್ಲಿದ್ದ ಕಸ ಹಾಗೂ ತ್ಯಾಜ್ಯ  ಸಿಮೆಂಟ್ ಕಿತ್ತು ತೆಗೆಯಲು, ಅವರಿಗೆ ಸುತ್ತಿಗೆ ಹಾಗೂ ಕಿರಿ ಹಾರೆ ಕೊಟ್ಟು ಕೆಲಕ್ಕೆ ಬಳಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಅಸಲಿಗೆ ಪೂಜಾರ ಹಳ್ಳಿ ತಾಂಡ ಕೂಡ್ಲಿಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಯುವರಾಜ ನಾಯಕ ರವರ ಅಜ್ಜಿಯ ತವರು ಊರೆಂದು ತಿಳಿದುಬಂದಿದೆ. ಬಿ.ಇ.ಓರವರ ನಂಟಿರುವ ಗ್ರಾಮದ ಶಾಲೆಯಲ್ಲಿ ಈ ದುರಾವಸ್ತೆ ಜರುಗಿದೆ. ಶಾಲಾವರಣ ದನಗಳ ಕೊಟ್ಟಿಗೆ ರೂಪದಲ್ಲಿದೆ. ಕಸ ತ್ಯಾಜ್ಯದಿಂದ ಶಾಲಾವರಣ ತುಂಬಿದೆ. ಮಳೆ ನೀರು ನಿಂತು ಕೊಚ್ಚೆ ಗುಂಡಿ ನಿರ್ಮಾಣವಾಗಿದೆ. ಆದರೂ ಸಂಬಂಧಿಸಿದವರು ಕ್ರಮ ಜರುಗಿಸಿಲ್ಲ. ಮಕ್ಕಳಿಗೆ ಶಿಸ್ಥಿನೊಂದಿಗೆ ಶಿಕ್ಷಣ ನೀಡಬೇಕಾಗಿರುವ ಗುರುಗಳು, ಅವರೇ ನಿಂತು ಮಕ್ಕಳಿಗೆ ಗಾರೆ ಹಾಗೂ ಕಸ ಮತ್ತು ಸಿಮೆಂಟ್,ತ್ಯಾಜ್ಯ ನೀರು ಬಳಿಯಲು ಬಳಸಿಕೊಂಡಿದ್ದಾರೆ, ಏನೂ ತಿಳಿಯದ ಮಕ್ಕಳಿಗೆ ಶಿಕ್ಷಣ ನೀಡದೇ ಅವರಿಗೆ ಗಾರೆ ಕೆಲದ ತರಬೇತಿ ನೀಡಿದಂತಹ ದೃಶ್ಯ ಕ್ಯಾಮೆರಾ ಕಣ್ಣಿಗೆ ಬಿದ್ದಿದೆ.ಈ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ, ಹಾಗೂ ನಾಗರೀಕರಲ್ಲಿ ಕೆಲವರಲ್ಲಿ ಮಾತ್ರ ಪರವಾದ ಅಭಿಪ್ರಾಯವಿದೆ. ಬಹುತೇಕರಲ್ಲಿ ಖಂಡನೀಯ ಅಭಿಪ್ರಾಯ ವ್ಯಕ್ತವಾಗಿದೆ. ಸಂಬಂಧಿಸಿದಂತೆ ಸಿಬ್ಬಂದಿ ವಿರುದ್ಧ ಶಿಸ್ಥು ಕ್ರಮಕ್ಕೆ ಒತ್ತಾಯ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು