10:30 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ವಿಜಯಪುರ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣದ ಆರೋಪಿ ಟಾಯ್ಲೆಟ್ ನಲ್ಲಿ ನೇಣಿಗೆ ಶರಣು; ಠಾಣೆಗೆ ಮುತ್ರಿಗೆ

29/08/2021, 18:56

ವಿಜಯಪುರ(reporterkarnataka.com): ಜಿಲ್ಲೆಯ ಸಿಂದಗಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪದಲ್ಲಿ ಬಂಧಿಸಲಾಗಿದ್ದ ಯುವಕ ಭಾನುವಾರ ಸಿಂದಗಿ ಪೊಲೀಸ್ ಠಾಣೆಯ ಶೌಚಾಲಯದಲ್ಲಿ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆ.

13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಯುವಕನನ್ನು ಪೋಕ್ಸೋ ಕಾಯ್ದೆಯಡಿ ಶನಿವಾರ ತಡರಾತ್ರಿ ಬಂಧಿಸಲಾಗಿತ್ತು. ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ ಎಂದು ಆಕೆಯ ತಂದೆ ದೂರು ಸಲ್ಲಿಸಿದ್ದರು. ಇದರ ಅನ್ವಯ ಯುವಕನನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿತ್ತು. 

ವಿಚಾರಣೆ ವೇಳೆ ಪೊಲೀಸ್ ಕಸ್ಟಡಿಯಲ್ಲಿರುವಾಗಲೇ ಶೌಚಾಲಯಕ್ಕೆ ತೆರಳಿದ್ದ ವ್ಯಕ್ತಿ ಧರಿಸಿದ್ದ ಪ್ಯಾಂಟ್‌ನಿಂದ ನೇಣು ಹಾಕಿಕೊಂಡಿದ್ದಾನೆ.

ಪೊಲೀಸರ ನಿರ್ಲಕ್ಷ್ಯದಿಂದ ಆತ ಸಾವನ್ನಪ್ಪಿದ್ದಾನೆ ಎಂದು ಆರೋಪಿಯ ಪೋಷಕರು, ಸಂಬಂಧಿಕರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು