2:25 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ವಿಜಯಪುರ: ಜೋಡೆತ್ತುಗಳಿಂದ ಮುಖ್ಯಮಂತ್ರಿ ಬೊಮ್ಮಾಯಿಯ ತಿವಿಯಲು ಯತ್ನ; ಇದಕ್ಕೆಲ್ಲ ಕಾರಣ ಏನು ಗೊತ್ತೇ?

26/04/2022, 16:29

ವಿಜಯಪುರ(reporterkarnataka.com):  ಜನಜಂಗುಳಿಯ ಗದ್ದಲದಿಂದ ಬೆದರಿದ ಜೋಡೆತ್ತುಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ತಿವಿಯಲು ಯತ್ನಿಸಿದ ಘಟನೆ ವಿಜಯಪುರದ ತಾಳಿಕೋಟೆಯ ಬಂಟನೂರಲ್ಲಿ ನಡೆದಿದೆ.

ಮುಖ್ಯಮಂತ್ರಿ ಬೊಮ್ಮಾಯಿ ಅವರು ಬಂಟನೂರು ಸಮೀಪದ ಬೂದಿಹಾಳ ಪೀರಾಪುರ ಏತ ನೀರಾವರಿ ಯೋಜನೆ ಶಂಕು ಸ್ಥಾಪನೆಗೆ ಆಗಮಿಸಿದ್ದರು. ಬಳಿಕ ಸಿಎಂ ಅವರು ಬಂಟನೂರು ಗ್ರಾಮದ ರೈತರಿಂದ ಜೋಡೆತ್ತು ಹಾಗೂ ಹಸು ಕಾಣಿಕೆ ಕಾರ್ಯಕ್ರಮದಲ್ಲಿ ಜೋಡೆತ್ತುವನ್ನು ಕಾಣಿಕೆ ನೀಡುವ ಕಾರ್ಯಕ್ರಮವಿತ್ತು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರು ಜೋಡೆತ್ತುವನ್ನು ನೋಡಲು ಹೋದಾಗ ಜನಜಂಗುಳಿ ಮತ್ತು ಗದ್ದಲದಿಂದ ಗಾಬರಿಗೊಂಡು ಬೊಮ್ಮಾಯಿ ಅವರನ್ನು ತಿವಿಯಲು ಮುಂದಾಯಿತು. ಸ್ಥಳದಲ್ಲೇ ಇದ್ದ ರೈತ ಎ. ಎಸ್. ಪಿ. ರಾಮ್ ಅರಸಿದ್ದಿ ಎಂಬುವವರು ತಕ್ಷಣ ಎತ್ತಿನ ಕೊಂಬನ್ನು ಹಿಡಿದು ಹಿಂದಕ್ಕೆ ಎಳೆದು ಮುಖ್ಯಮಂತ್ರಿಯವರನ್ನು ಪಾರು ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು