1:14 PM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ವಿಜಯಪುರ: ಜೋಡೆತ್ತುಗಳಿಂದ ಮುಖ್ಯಮಂತ್ರಿ ಬೊಮ್ಮಾಯಿಯ ತಿವಿಯಲು ಯತ್ನ; ಇದಕ್ಕೆಲ್ಲ ಕಾರಣ ಏನು ಗೊತ್ತೇ?

26/04/2022, 16:29

ವಿಜಯಪುರ(reporterkarnataka.com):  ಜನಜಂಗುಳಿಯ ಗದ್ದಲದಿಂದ ಬೆದರಿದ ಜೋಡೆತ್ತುಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ತಿವಿಯಲು ಯತ್ನಿಸಿದ ಘಟನೆ ವಿಜಯಪುರದ ತಾಳಿಕೋಟೆಯ ಬಂಟನೂರಲ್ಲಿ ನಡೆದಿದೆ.

ಮುಖ್ಯಮಂತ್ರಿ ಬೊಮ್ಮಾಯಿ ಅವರು ಬಂಟನೂರು ಸಮೀಪದ ಬೂದಿಹಾಳ ಪೀರಾಪುರ ಏತ ನೀರಾವರಿ ಯೋಜನೆ ಶಂಕು ಸ್ಥಾಪನೆಗೆ ಆಗಮಿಸಿದ್ದರು. ಬಳಿಕ ಸಿಎಂ ಅವರು ಬಂಟನೂರು ಗ್ರಾಮದ ರೈತರಿಂದ ಜೋಡೆತ್ತು ಹಾಗೂ ಹಸು ಕಾಣಿಕೆ ಕಾರ್ಯಕ್ರಮದಲ್ಲಿ ಜೋಡೆತ್ತುವನ್ನು ಕಾಣಿಕೆ ನೀಡುವ ಕಾರ್ಯಕ್ರಮವಿತ್ತು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರು ಜೋಡೆತ್ತುವನ್ನು ನೋಡಲು ಹೋದಾಗ ಜನಜಂಗುಳಿ ಮತ್ತು ಗದ್ದಲದಿಂದ ಗಾಬರಿಗೊಂಡು ಬೊಮ್ಮಾಯಿ ಅವರನ್ನು ತಿವಿಯಲು ಮುಂದಾಯಿತು. ಸ್ಥಳದಲ್ಲೇ ಇದ್ದ ರೈತ ಎ. ಎಸ್. ಪಿ. ರಾಮ್ ಅರಸಿದ್ದಿ ಎಂಬುವವರು ತಕ್ಷಣ ಎತ್ತಿನ ಕೊಂಬನ್ನು ಹಿಡಿದು ಹಿಂದಕ್ಕೆ ಎಳೆದು ಮುಖ್ಯಮಂತ್ರಿಯವರನ್ನು ಪಾರು ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು