12:41 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ವಿಜಯಪುರ: ಜೋಡೆತ್ತುಗಳಿಂದ ಮುಖ್ಯಮಂತ್ರಿ ಬೊಮ್ಮಾಯಿಯ ತಿವಿಯಲು ಯತ್ನ; ಇದಕ್ಕೆಲ್ಲ ಕಾರಣ ಏನು ಗೊತ್ತೇ?

26/04/2022, 16:29

ವಿಜಯಪುರ(reporterkarnataka.com):  ಜನಜಂಗುಳಿಯ ಗದ್ದಲದಿಂದ ಬೆದರಿದ ಜೋಡೆತ್ತುಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ತಿವಿಯಲು ಯತ್ನಿಸಿದ ಘಟನೆ ವಿಜಯಪುರದ ತಾಳಿಕೋಟೆಯ ಬಂಟನೂರಲ್ಲಿ ನಡೆದಿದೆ.

ಮುಖ್ಯಮಂತ್ರಿ ಬೊಮ್ಮಾಯಿ ಅವರು ಬಂಟನೂರು ಸಮೀಪದ ಬೂದಿಹಾಳ ಪೀರಾಪುರ ಏತ ನೀರಾವರಿ ಯೋಜನೆ ಶಂಕು ಸ್ಥಾಪನೆಗೆ ಆಗಮಿಸಿದ್ದರು. ಬಳಿಕ ಸಿಎಂ ಅವರು ಬಂಟನೂರು ಗ್ರಾಮದ ರೈತರಿಂದ ಜೋಡೆತ್ತು ಹಾಗೂ ಹಸು ಕಾಣಿಕೆ ಕಾರ್ಯಕ್ರಮದಲ್ಲಿ ಜೋಡೆತ್ತುವನ್ನು ಕಾಣಿಕೆ ನೀಡುವ ಕಾರ್ಯಕ್ರಮವಿತ್ತು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರು ಜೋಡೆತ್ತುವನ್ನು ನೋಡಲು ಹೋದಾಗ ಜನಜಂಗುಳಿ ಮತ್ತು ಗದ್ದಲದಿಂದ ಗಾಬರಿಗೊಂಡು ಬೊಮ್ಮಾಯಿ ಅವರನ್ನು ತಿವಿಯಲು ಮುಂದಾಯಿತು. ಸ್ಥಳದಲ್ಲೇ ಇದ್ದ ರೈತ ಎ. ಎಸ್. ಪಿ. ರಾಮ್ ಅರಸಿದ್ದಿ ಎಂಬುವವರು ತಕ್ಷಣ ಎತ್ತಿನ ಕೊಂಬನ್ನು ಹಿಡಿದು ಹಿಂದಕ್ಕೆ ಎಳೆದು ಮುಖ್ಯಮಂತ್ರಿಯವರನ್ನು ಪಾರು ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು