8:05 PM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದ ಮಗು; ಸತತ 20 ತಾಸುಗಳ ಕಾರ್ಯಾಚರಣೆ ಬಳಿಕ ಮೃತ್ಯುಂಜಯನಾದ ಸಾತ್ವಿಕ್

04/04/2024, 19:02

ಭೀಮಣ್ಣ ಪೂಜಾರಿ ಶಿರನಾಳ ವಿಜಯಪುರ

info.reporterkarnataka@gmail.com

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಚನಾ ಗ್ರಾಮದ ಹೊಲದಲ್ಲಿರುವ ಕೊಳವೆ ಭಾವಿಯಲ್ಲಿ ಬಿದ್ದ ಮಗುವನ್ನು ಸತತ 20 ತಾಸುಗಳ ಕಾರ್ಯಾಚರಣೆಯ ಬಳಿಕ ಸುರಕ್ಷಿತವಾಗಿ ರಕ್ಷಿಸಲಾಗಿದೆ.



ಲಚ್ಚನಾ ಗ್ರಾಮದ ಸಾತ್ವಿಕ್ ಎಂಬ ಮಗು ಹೊಲದಲ್ಲಿ ತೆರೆದ ಸ್ಥಿತಿಯಲ್ಲಿದ್ದ ಕೊಳವೆ ಬಾವಿಗೆ ಆಕಸ್ಮಿಕವಾಗಿ ಬಿದ್ದಿತ್ತು. ಆದರೆ, ಎನ್ ಡಿಆರ್ ಎಫ್, ಅಗ್ನಿಶಾಮಕದಳ, ಪೊಲೀಸ್ ಪಡೆ, ವೈದ್ಯಕೀಯ ತಂಡದ ಸಂಯುಕ್ತ ಕಾರ್ಯಾಚರಣೆಯಲ್ಲಿ ಸುಮಾರು 20 ತಾಸುಗಳ ಕಾರ್ಯಾಚರಣೆ ನಡೆಸಿ ಮಗುವನ್ನು ಸುರಕ್ಷಿತವಾಗಿ ಮೇಲಕ್ಕೆತ್ತಲಾಗಿದೆ. ಕೊಳವೆ ಬಾವಿಗೆ ಸಮನಾಂತರದಲ್ಲಿ ಗುಂಡಿ ಕೊರೆದು ನಂತರ ಮಗು ಇರುವ ಸ್ಥಳಕ್ಕೆ ಸುರಂಗ ಕೊರೆದು ಬಹಳ ಕ್ಲಿಷ್ಟಕರವಾದ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರೈಸಲಾಗಿದೆ. ಸಾತ್ವಿಕ್ ಗೆ ಮೃತ್ಯುಂಜಯ ಅಂತ ಗ್ರಾಮಸ್ಥರು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು