10:08 AM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ವಿಜಯಪುರ ಮಹಾನಗರಪಾಲಿಕೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ: ಜನತಾದಳ, ಪಕ್ಷೇತರರ ಬೆಂಬಲದಿಂದ ಮೆಹಜಬೀನ್ ಹೊರ್ತಿ ಮೇಯರ್

09/01/2024, 21:31

ವಿಜಯಪುರ(reporterkarnataka.com): ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 17 ಸ್ಥಾನಗಳನ್ನು ಹೊಂದಿದ್ದರೂ 10 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ಎಐಎಂಐಎಂ, ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರ ಬೆಂಬಲದೊಂದಿಗೆ ಮತ್ತೆ ಅಧಿಕಾರದ ಗದ್ದುಗೆ ಏರಿದೆ. ಕಾಂಗ್ರೆಸ್‌ನ ಮೆಹಜಬೀನ್ ಹೊರ್ತಿ ಮೇಯರ್ ಹಾಗೂ ಅದೇ ಪಕ್ಷದ ದಿನೇಶ್ ಹಳ್ಳಿ ಉಪ ಮೇಯರ್ ಆಗಿ ಆಯ್ಕೆಗೊಂಡಿದ್ದಾರೆ.
ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾಂಗ್ರೆಸ್ ನ ಮಹೆಜಬೀನ್ ಹೊರ್ತಿ ಒಟ್ಟು 22 ಮತಗಳನ್ನು ಪಡೆದು ಆಯ್ಕೆಯಾದರು. 10 ಕಾಂಗ್ರೆಸ್ ಸದಸ್ಯರು, ಐವರು ಪಕ್ಷೇತರರು, ಇಬ್ಬರು ಎಐಎಂಐಎಂ, ಓರ್ವ ಜೆಡಿಎಸ್ ಸದಸ್ಯರ ಬೆಂಬಲ ಹಾಗೂ ಶಾಸಕರಾದ ಎಂ.ಬಿ. ಪಾಟೀಲ್, ವಿಠ್ಠಲ್ ಕಟಕದೊಂಡ, ಪರಿಷತ್ ಸದಸ್ಯರಾದ ಸುನಿಲಗೌಡ ಪಾಟೀಲ್, ಪ್ರಕಾಶ್ ರಾಠೋಡ್ ಮತಗಳ ಬೆಂಬಲದೊಂದಿಗೆ ಗೆಲವು ಸಾಧಿಸಿದ್ದಾರೆ.
ಬಿಜೆಪಿಯ 17 ಸದಸ್ಯರ ಪೈಕಿ ಓರ್ವ ಬಿಜೆಪಿ ಸದಸ್ಯ ನಿಧನರಾಗಿದ್ದು, 16 ಸದಸ್ಯರ ಜೊತೆಗೆ ನಗರ ಶಾಸಕ
ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಂಸದ ರಮೇಶ ಜಿಗಜಿಣಗಿ ಮತ ಸೇರಿ ಒಟ್ಟು 18 ಮತಗಳು ಮಾತ್ರ ಬಿಜೆಪಿ ಕೈಯ್ಯಲ್ಲಿತ್ತು. ಓರ್ವ ಸದಸ್ಯ ನಿಧನರಾದ ಹಿನ್ನೆಲೆಯಲ್ಲಿ ಚುನಾವಣೆ ನಡೆಸಬಾರದು ಎಂದು ಬಿಜೆಪಿ ಮನವಿ ಮಾಡಿತ್ತು.
ಎಸ್‌ಟಿ ಸಮಾಜಕ್ಕೆ ಮೀಸಲಾಗಿದ್ದ ಉಪಮೇಯರ್ ಸ್ಥಾನಕ್ಕೆ ಕಾಂಗ್ರೆಸ್ಸಿನ ದಿನೇಶ್ ಹಳ್ಳಿ ಮಾತ್ರ ಸ್ಪರ್ಧಿಸಿರುವುದರಿಂದ ಅವರು
ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾ ಪ್ರಕ್ರಿಯೆಯನ್ನು ಬಹಿಷ್ಕರಿಸಿ ಬಿಜೆಪಿಯ 16 ಸದಸ್ಯರು ಹಾಗೂ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಹೊರ ನಡೆದ ಪ್ರಸಂಗ ನಡೆಯಿತು. ಇದು ಅಕ್ರಮದ ಚುನಾವಣೆಯಾಗಿದ್ದು ಸರ್ಕಾರದ ಅಣತಿಯಂತೆ ಚುನಾವಣಾಧಿಕಾರಿಗಳು ನಡೆದುಕೊಂಡಿದ್ದಾರೆ. ಈ ಚುನಾವಣೆಯ ಬಗ್ಗೆ ನಾವು ಕೋರ್ಟ್‌ ಮೊರೆ ಹೋಗುತ್ತೇವೆ ಎಂದು ಯತ್ನಾಳ್ ಕಿಡಿಕಾರಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಎಂ.ಬಿ. ಪಾಟೀಲ್‌, ಚುನಾವಣೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಬಿಜೆಪಿ ಮೊದಲೇ ಸೋಲು ಒಪ್ಪಿಕೊಂಡಿತ್ತು. ಎಲ್ಲರ ಸಹಾಯದಿಂದ ಕಾಂಗ್ರೆಸ್ ಚುಕ್ಕಾಣಿ ಹಿಡಿದಿದೆ. ನಗರದ ಅಭಿವೃದ್ಧಿಗಾಗಿ ನಾವು ಶ್ರಮಿಸುತ್ತೇವೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು