8:32 PM Sunday7 - June 2026
ಬ್ರೇಕಿಂಗ್ ನ್ಯೂಸ್
ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:…

ಇತ್ತೀಚಿನ ಸುದ್ದಿ

ವಿಜಯಪುರ: ಚಾಕುವಿನಿಂದ ಇರಿದು, ಕಲ್ಲಿನಿಂದ ಜಜ್ಜಿ ಯುವಕನ ಅಮಾನುಷ ಹತ್ಯೆ; ಹಣಕಾಸಿನ ವ್ಯವಹಾರ ಸಂಬಂಧ ಗುಮ್ಮಟನಗರಿಯಲ್ಲಿ ಬಿತ್ತೇ ಹೆಣ?

20/05/2024, 14:01

ಭೀಮಣ್ಣ ಪೂಜಾರ್ ಶಿರನಾಳ ವಿಜಯಪುರ

info.reporterkarnataka@gmail.com

ವಿಜಯಪುರದ ಎಪಿಎಂಸಿ ಬಳಿ ಚಾಕುವಿನಿಂದ ಇರಿದು, ಕಲ್ಲಿನಿಂದ ಜಜ್ಜಿ ಯುವಕನೊಬ್ಬನನ್ನು ಅಮಾನುಷವಾಗಿ ಕೊಲೆ ಮಾಡಲಾಗಿದೆ.
ಕೊಲೆಯಾದ ಯುವಕನನ್ನು ನಗರದ ಕಂಬಾರ ಓಣಿ ನಿವಾಸಿ ರೋಹಿತ್ ಸುಭಾಶ್​ ಪವಾರ(23) ಎಂದು ಗುರುತಿಸಲಾಗಿದೆ.
ವಿಜಯಪುರದ ಎಪಿಎಂಸಿ ಆವರಣದಲ್ಲಿನ ಮಾಂಸ ಮಾರುಕಟ್ಟೆಯ ಬಳಿ ರೋಹಿತ್ ನನ್ನು ಚಾಕುವಿನಿಂದ ಇರಿದು, ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಲಾಗಿದೆ. ಕೊಲೆ ಬಳಿಕ ಯವಕನ ಶವವನ್ನು ಅಲ್ಲೇ ಪಕ್ಕದ ಮುಳ್ಳುಕಂಟಿಯಲ್ಲಿ ಹಾಕಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಕೊಲೆ ನಡೆದ ಸ್ಥಳದಲ್ಲಿ ಒಂದು ಮಚ್ಚು, ಒಂದು ಚಾಕೂ, ಕಲ್ಲು ಹಾಗೂ ಖಾರದ ಪುಡಿ ದೊರಕಿದೆ. ಹಣಕಾಸಿನ‌ ವ್ಯವಹಾರ ಕೊಲೆಗೆ ಕಾರಣ ಎನ್ನಲಾಗಿದೆ. ಆದರೆ ನಿಖರವಾದ ಕಾರಣ ತನಿಖೆಯಿಂದ ಇನ್ನು ಹೊರ ಬರಬೇಕಾಗಿದೆ.
ಕಳೆದ ರಂಜಾನ್ ಹಬ್ಬದ ವೇಳೆ ರೌಡಿ ಶೀಟರ್ ಹತ್ಯೆ ನಡೆದಿತ್ತು.
ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹಂತಕರ ಪತ್ತೆಗೆ ಖಾಕಿ ಪಡೆ ಬಲೆ ಬೀಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು