4:50 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ವಿಜ್ಞಾನ ಸ್ಪರ್ಧೆಯಿಂದ ವಿದ್ಯಾರ್ಥಿಗಳಲ್ಲಿ ವೖಜ್ಞಾನಿಕ ಮನೋಭಾವ, ವೈಚಾರಿಕತೆ ಬೆಳೆಸಲು ಸಾಧ್ಯ: ಎಸ್. ಎನ್. ಸುಬ್ರಮಣ್ಯಂ

24/11/2024, 21:40

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ವಿದ್ಯಾರ್ಥಿಗಳಲ್ಲಿ ವೖಜ್ಞಾನಿಕ ಮನೋಭಾವ, ಮಾನವೀಯತೆ, ವೖಚಾರಿಕ ಮನೋಧರ್ಮ ಮತ್ತು ಸುಧಾರಣೆಯನ್ನು ತರಲು ವಿಜ್ಞಾನ ಸ್ಪರ್ಧಾ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ನಿವೃತ್ತ ಕಂದಾಯ ಅಧಿಕಾರಿ ಎಸ್. ಎನ್. ಸುಬ್ರಮಣ್ಯಂ ಹೇಳಿದರು.
ಶ್ರೀನಿವಾಸಪುರ ತಾಲೂಕಿನ ಯಲ್ಡೂರುಗ್ರಾಮದ ನ್ಯಾಷನಲ್ ಹೖಸ್ಕೂಲಿನಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಅಂತರ ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ವಿಜ್ಞಾನ ವಿಷಯಗಳ ಭಾಷಣ ಮತ್ತು ಪ್ರಬಂಧ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡುತ್ತಾ, ಆಧುನಿಕ ಯುಗದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ವಿಜ್ಞಾನದ ಬಳಕೆಯಾಗುತ್ತಿದೆ.

ಮಕ್ಕಳಿಗೆ ಈಗನಿಂದಲೇ ವಿಜ್ಞಾನದ ಮೇಲೆ ಆಸಕ್ತಿ ಮೂಡಿಸುವುದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಜ್ಙಾನಾದ್ರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಟಿ. ವಿ. ಮಲ್ಲಿಕಾರ್ಜುನರೆಡ್ಡಿ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ವಿಜ್ಞಾನ ಮತ್ತು ಅದರ ಉಪಯೋಗವನ್ನು ಅರಿತು ಜೀವನ ನಡೆಸಿದರೆ ಅದು ಯಶಸ್ವಿಯಾಗಲು ಸಾಧ್ಯ ಎಂದು ತಿಳಿಸಿದರು.
ಶಾಲಾ ನಿರ್ವಹಣಾ ಸಮಿತಿಯ ಸದಸ್ಯರಾದ ಕೆ. ಟಿ. ಜಯಣ್ಣ, ಎನ್. ಹರಿಕುಮಾರ್, ರಮೇಶ್ ಬಾಬು, ಶಾಲಾ ಮುಖ್ಯ ಶಿಕ್ಷಕ ಮಂಜುನಾಥ ದೇವೇಗೌಡ, ನಿವೃತ್ತ ಮುಖ್ಯ ಶಿಕ್ಷಕರಾದ ಕೆ. ಪ್ರಕಾಶಯ್ಯ, ಕೆ. ಪಿ. ಕೃಷ್ಣಪ್ಪ, ನಿವೃತ್ತ ಶಿಕ್ಷಕರಾದ ಎನ್. ಹರಿಕುಮಾರ್, ಡಿ. ವಿ. ಸಿದ್ದಾರೆಡ್ಡಿ, ಸಿ ಆರ್. ಪಿ ಸುಜಾತ, ಗಂಗೋತ್ರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಲ್. ಸುಬ್ರಮಣಿ, ಯಲ್ದೂರು ಹೋಬಳಿ ಕರವೇ ಪ್ರಧಾನ ಕಾರ್ಯದರ್ಶಿ ಎಲ್. ಮುರಳಿಮೋಹನ್, ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಜಿ. ಕೆ. ಮುರಳಿ, ಸಮಾಜ ಸೇವಕ ಅಂಬರೀಶ್, ಬ್ರಿಲಿಯಂಟ್ ಪಬ್ಲಿಕ್ ಶಾಲೆಯ ಅಪ್ಸರ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು