5:01 PM Sunday23 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ

ಇತ್ತೀಚಿನ ಸುದ್ದಿ

ವಿಜ್ಞಾನ ಸ್ಪರ್ಧೆಯಿಂದ ವಿದ್ಯಾರ್ಥಿಗಳಲ್ಲಿ ವೖಜ್ಞಾನಿಕ ಮನೋಭಾವ, ವೈಚಾರಿಕತೆ ಬೆಳೆಸಲು ಸಾಧ್ಯ: ಎಸ್. ಎನ್. ಸುಬ್ರಮಣ್ಯಂ

24/11/2024, 21:40

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ವಿದ್ಯಾರ್ಥಿಗಳಲ್ಲಿ ವೖಜ್ಞಾನಿಕ ಮನೋಭಾವ, ಮಾನವೀಯತೆ, ವೖಚಾರಿಕ ಮನೋಧರ್ಮ ಮತ್ತು ಸುಧಾರಣೆಯನ್ನು ತರಲು ವಿಜ್ಞಾನ ಸ್ಪರ್ಧಾ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ನಿವೃತ್ತ ಕಂದಾಯ ಅಧಿಕಾರಿ ಎಸ್. ಎನ್. ಸುಬ್ರಮಣ್ಯಂ ಹೇಳಿದರು.
ಶ್ರೀನಿವಾಸಪುರ ತಾಲೂಕಿನ ಯಲ್ಡೂರುಗ್ರಾಮದ ನ್ಯಾಷನಲ್ ಹೖಸ್ಕೂಲಿನಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಅಂತರ ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ವಿಜ್ಞಾನ ವಿಷಯಗಳ ಭಾಷಣ ಮತ್ತು ಪ್ರಬಂಧ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡುತ್ತಾ, ಆಧುನಿಕ ಯುಗದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ವಿಜ್ಞಾನದ ಬಳಕೆಯಾಗುತ್ತಿದೆ.

ಮಕ್ಕಳಿಗೆ ಈಗನಿಂದಲೇ ವಿಜ್ಞಾನದ ಮೇಲೆ ಆಸಕ್ತಿ ಮೂಡಿಸುವುದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಜ್ಙಾನಾದ್ರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಟಿ. ವಿ. ಮಲ್ಲಿಕಾರ್ಜುನರೆಡ್ಡಿ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ವಿಜ್ಞಾನ ಮತ್ತು ಅದರ ಉಪಯೋಗವನ್ನು ಅರಿತು ಜೀವನ ನಡೆಸಿದರೆ ಅದು ಯಶಸ್ವಿಯಾಗಲು ಸಾಧ್ಯ ಎಂದು ತಿಳಿಸಿದರು.
ಶಾಲಾ ನಿರ್ವಹಣಾ ಸಮಿತಿಯ ಸದಸ್ಯರಾದ ಕೆ. ಟಿ. ಜಯಣ್ಣ, ಎನ್. ಹರಿಕುಮಾರ್, ರಮೇಶ್ ಬಾಬು, ಶಾಲಾ ಮುಖ್ಯ ಶಿಕ್ಷಕ ಮಂಜುನಾಥ ದೇವೇಗೌಡ, ನಿವೃತ್ತ ಮುಖ್ಯ ಶಿಕ್ಷಕರಾದ ಕೆ. ಪ್ರಕಾಶಯ್ಯ, ಕೆ. ಪಿ. ಕೃಷ್ಣಪ್ಪ, ನಿವೃತ್ತ ಶಿಕ್ಷಕರಾದ ಎನ್. ಹರಿಕುಮಾರ್, ಡಿ. ವಿ. ಸಿದ್ದಾರೆಡ್ಡಿ, ಸಿ ಆರ್. ಪಿ ಸುಜಾತ, ಗಂಗೋತ್ರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಲ್. ಸುಬ್ರಮಣಿ, ಯಲ್ದೂರು ಹೋಬಳಿ ಕರವೇ ಪ್ರಧಾನ ಕಾರ್ಯದರ್ಶಿ ಎಲ್. ಮುರಳಿಮೋಹನ್, ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಜಿ. ಕೆ. ಮುರಳಿ, ಸಮಾಜ ಸೇವಕ ಅಂಬರೀಶ್, ಬ್ರಿಲಿಯಂಟ್ ಪಬ್ಲಿಕ್ ಶಾಲೆಯ ಅಪ್ಸರ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು