5:08 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ವಿಜೃಂಭಣೆಯಿಂದ ನಡೆದ ತಿರುವೈಲೋತ್ಸವ ; ಸಂಕುಪೂಂಜ ದೇವುಪೂಂಜ ಕರೆಯಲ್ಲಿ ಕಳೆ ಕಟ್ಟಿದ ಕಂಬಳದ ಸಂಭ್ರಮ

19/02/2022, 22:48

ಗಣೇಶ್ ಅದ್ಯಾಪಾಡಿ ಮಂಗಳೂರು

ಮಂಗಳೂರು(Reporterkarnataka.com)ದೇವರು ನೋಡುವ ಕಂಬಳ ಎಂದೇ ಖ್ಯಾತಿ ಪಡೆದ ವಾಮಂಜೂರು ತಿರುವೈಲು ಗುತ್ತು ಸಂಕುಪೂಂಜ ದೇವುಪೂಂಜ ಜೋಡುಕೆರೆ ಕಂಬಳ ಟ್ರಸ್ಟ್ ನೇತೃತ್ವದಲ್ಲಿ ತುಳುನಾಡಿನ ಕಂಬಳ ತಿರುವೈಲೋತ್ಸವಕ್ಕೆ ಶನಿವಾರ ಚಾಲನೆ ನೀಡಲಾಯಿತು.


ಶಾರದಾ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಎಂ.ಬಿ.ಪುರಾಣಿಕ್ ಅವರು ಕಂಬಳವನ್ನು ಉದ್ಘಾಟಿಸಿದರು. ಕರಾವಳಿ ಎಜುಕೇಶನ್ ಟ್ರಸ್ಟ್ ಮುಖ್ಯಸ್ಥರಾದ ಗಣೇಶ್ ರಾವ್ ಅಧ್ಯಕ್ಷತೆ ವಹಿಸಿದ್ದರು. ಗೋಳಿದಡಿ ಗುತ್ತು ಗಡಿಕಾರರಾದ ವರ್ಧಮಾನ್ ದುರ್ಗಾಪ್ರಸಾದ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಎಸ್.ಮಂಜುನಾಥ ಭಂಡಾರಿ, ಮರೋಳಿ ಶ್ರೀ ಸೂರ್ಯನಾರಾಯಣ ದೇವಾಲಯದ ಅಧ್ಯಕ್ಷರಾದ ಗಣೇಶ್ ಶೆಟ್ಟಿ, ಉದ್ಯಮಿ ನಿತಿನ್ ಶೆಟ್ಟಿ, ಕಾರ್ಪೋರೇಟರ್ ಹೇಮಲತಾ ರಘು ಸಾಲ್ಯಾನ್ ತಿರುವೈಲುಗುತ್ತು ಕಂಬಳ ಸಮಿತಿ ಗೌರವಾಧ್ಯಕ್ಷ ಮಿಥುನ್ ರೈ, ಅಧ್ಯಕ್ಷ ನವೀನ್ ಚಂದ್ರ ಆಳ್ವ, ಕಾರ್ಯಾಧ್ಯಕ್ಷ ಪ್ರವೀಣ್ ಚಂದ್ರ ಆಳ್ವ ಮೊದಲಾದವರು ಉಪಸ್ಥಿತರಿದ್ದರು.



ವಾಮಂಜೂರು ತಿರುವೈಲು ಶ್ರೀ ಅಮೃತೇಶ್ವರ ದೇವಾಲಯದ ಎದುರಿನ ಕಂಬಳ ಗದ್ದೆಯಲ್ಲಿ ನಡೆಯುತ್ತಿರುವ ಈ ಕಂಬಳೋತ್ಸವದಲ್ಲಿ 160 ಜೋಡಿ ಕೋಣಗಳು ಭಾಗವಹಿಸುವ ನಿರೀಕ್ಷೆ ಇದೆ.
ಪಾಲಿಕೆ ವ್ಯಾಪ್ತಿಯಲ್ಲಿದ್ದರೂ ತುಳು ನಾಡಿನ ಘಮಲನ್ನು ಉಳಿಸಿಕೊಂಡು ಸಾಂಪ್ರಾದಾಯಿಕವಾಗಿ ನಡೆಸಿಕೊಂಡು ಬರಲಾಗುತ್ತಿದೆ.


ಕಳೆದ ಹತ್ತು ವರ್ಷಗಳಿಂದ ತಿರುವೈಲೋತ್ಸವ ವಿಜೃಂಭಣೆಯಿಂದ ನಡೆದುಕೊಂಡು ಬರುತ್ತಿದು ಕೊರೊನಾ ಹಾಗೂ ಇನ್ನಿತರ ಎಡರು ತೊಡರುಗಳ ನಡುವೆ ಮತ್ತೊಮ್ಮೆ ಸಂಕುಪೂಂಜ ದೇವುಪೂಂಜ ಕರೆಗಳು ಕಳೆ ಕಟ್ಟಿದು ತುಳು ನಾಡ ಮಣ್ಣಿನ ಪರಿಮಳವನ್ನು ನಾಡಿನಾದ್ಯಂತ ಪಸರಿಸುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು