12:16 AM Sunday5 - July 2026
ಬ್ರೇಕಿಂಗ್ ನ್ಯೂಸ್
ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ…

ಇತ್ತೀಚಿನ ಸುದ್ದಿ

ವಿಕ್ರಂ ಗೌಡ ಎನ್ ಕೌಂಟರ್: ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತ ಮುಂದೆ 6 ಮಂದಿ ನಕ್ಸಲರು ಶರಣಾಗತಿ?

07/01/2025, 11:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಕ್ಸಲ್ ನಾಯಕ ವಿಕ್ರಂ ಗೌಡನ ಎನ್ ಕೌಂಟರ್ ನಿಂದ ಕಸಿವಿಸಿಗೊಂಡ ನಕ್ಸಲರು ಶರಣಾಗತಿಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ 6 ಜನ ನಕ್ಸಲರು ನಾಳೆ(ಜ.8)ಶರಣಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಒಂದೇ ಒಂದು ಎನ್ ಕೌಂಟರ್ ಗೆ ಕಾಡಲ್ಲಿ ನಕ್ಸಲರ ಸದ್ದಡಗಿದೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.


ಆಲ್ ಮೋಸ್ಟ್, ಕಾಫಿನಾಡ ಕಾಡಲ್ಲಿ ನಕ್ಸಲರ ಯುಗಾಂತ್ಯವಾಗಲಿದೆ.
ನಕ್ಸಲ್ ಶರಣಾಗತಿಗೆ ದಿನಾಂಕ ನಿಗದಿಯಾಗಿದ್ದು, ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತ ಮುಂದೆ ನಕ್ಸಲರು ಶರಣಾಗುವ ಸಾಧ್ಯತೆ ಇದೆ. ನಕ್ಸಲ್ ನಾಯಕಿ ಮುಂಡಗಾರು ಲತಾ ಸೇರಿದಂತೆ ಪ್ರಮುಖ ನಕ್ಸಲರು ಶರಣಾಗತಿಗೆ ಬಯಸಿದ್ದಾರೆ ಎಂದು ತಿಳಿದು ಬಂದಿದೆ.
ವನಜಾಕ್ಷಿ, ಸುಂದರಿಣ ಮಾರೆಪ್ಪ, ವಸಂತ, ಜೀಶ್ ಶರಣಾಗಲಿರುವ ಪ್ರಮುಖರು.
ಮಾಜಿ ನಕ್ಸಲ್ ನೂರ್ ಜುಲ್ಫಿಕರ್ ಶ್ರೀಧರ್ ನೇತೃತ್ವದಲ್ಲಿ ಶರಣಾಗತಿಯಾಗಲಿದ್ದಾರೆ.
ಸರ್ಕಾರ ರಚನೆ ಮಾಡಿರುವ ಜಿಲ್ಲಾ ಕಮಟಿ ಮುಂದೆ ಶರಣಾಗಲಿದ್ದಾರೆ. ಶಾಂತಿಗಾಗಿ ನಾಗರೀಕ ವೇದಿಕೆಯ ಅಡಿಯಲ್ಲಿ ನಕ್ಸಲರು ಶರಣಾಗತಿ ಬಯಸಿದ್ದಾರೆ.
ಜಿಲ್ಲಾಧಿಕಾರಿ ಮೀನಾ ನಾಗರಾಜ್, ಎಸ್.ಪಿ.ವಿಕ್ರಮ ಅಮಟೆ ಮುಂದೆ ಈ ಪ್ರಕ್ರಿಯೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು