12:20 AM Wednesday13 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ವಿಕ್ರಂ ಗೌಡ ಎನ್ ಕೌಂಟರ್: ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತ ಮುಂದೆ 6 ಮಂದಿ ನಕ್ಸಲರು ಶರಣಾಗತಿ?

07/01/2025, 11:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಕ್ಸಲ್ ನಾಯಕ ವಿಕ್ರಂ ಗೌಡನ ಎನ್ ಕೌಂಟರ್ ನಿಂದ ಕಸಿವಿಸಿಗೊಂಡ ನಕ್ಸಲರು ಶರಣಾಗತಿಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ 6 ಜನ ನಕ್ಸಲರು ನಾಳೆ(ಜ.8)ಶರಣಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಒಂದೇ ಒಂದು ಎನ್ ಕೌಂಟರ್ ಗೆ ಕಾಡಲ್ಲಿ ನಕ್ಸಲರ ಸದ್ದಡಗಿದೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.


ಆಲ್ ಮೋಸ್ಟ್, ಕಾಫಿನಾಡ ಕಾಡಲ್ಲಿ ನಕ್ಸಲರ ಯುಗಾಂತ್ಯವಾಗಲಿದೆ.
ನಕ್ಸಲ್ ಶರಣಾಗತಿಗೆ ದಿನಾಂಕ ನಿಗದಿಯಾಗಿದ್ದು, ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತ ಮುಂದೆ ನಕ್ಸಲರು ಶರಣಾಗುವ ಸಾಧ್ಯತೆ ಇದೆ. ನಕ್ಸಲ್ ನಾಯಕಿ ಮುಂಡಗಾರು ಲತಾ ಸೇರಿದಂತೆ ಪ್ರಮುಖ ನಕ್ಸಲರು ಶರಣಾಗತಿಗೆ ಬಯಸಿದ್ದಾರೆ ಎಂದು ತಿಳಿದು ಬಂದಿದೆ.
ವನಜಾಕ್ಷಿ, ಸುಂದರಿಣ ಮಾರೆಪ್ಪ, ವಸಂತ, ಜೀಶ್ ಶರಣಾಗಲಿರುವ ಪ್ರಮುಖರು.
ಮಾಜಿ ನಕ್ಸಲ್ ನೂರ್ ಜುಲ್ಫಿಕರ್ ಶ್ರೀಧರ್ ನೇತೃತ್ವದಲ್ಲಿ ಶರಣಾಗತಿಯಾಗಲಿದ್ದಾರೆ.
ಸರ್ಕಾರ ರಚನೆ ಮಾಡಿರುವ ಜಿಲ್ಲಾ ಕಮಟಿ ಮುಂದೆ ಶರಣಾಗಲಿದ್ದಾರೆ. ಶಾಂತಿಗಾಗಿ ನಾಗರೀಕ ವೇದಿಕೆಯ ಅಡಿಯಲ್ಲಿ ನಕ್ಸಲರು ಶರಣಾಗತಿ ಬಯಸಿದ್ದಾರೆ.
ಜಿಲ್ಲಾಧಿಕಾರಿ ಮೀನಾ ನಾಗರಾಜ್, ಎಸ್.ಪಿ.ವಿಕ್ರಮ ಅಮಟೆ ಮುಂದೆ ಈ ಪ್ರಕ್ರಿಯೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು