1:06 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ವಿಳಾಸ ಕೇಳುವ ನೆಪದಲ್ಲಿ ಹಾಡಹಗಲೇ ವೃದ್ದೆಯ ಕೊರಳಿನಿಂದ ಸರ ಎಗರಿಸಿದ ಖದೀಮರು: ಕಳ್ಳರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆ

13/06/2023, 15:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯ ಸುಗ್ಗಿಕಲ್ ರಸ್ತೆಯಲ್ಲಿ ಹಾಡಹಗಲೇ ಬೈಕ್ ನಲ್ಲಿ ಬಂದ ಕಳ್ಳರು ವಿಳಾಸ ಕೇಳುವ ನೆಪದಲ್ಲಿ ವೃದ್ಧೆಯ ಸರ ಎಗರಿಸಿದ ಘಟನೆ ನಡೆದಿದೆ.
ವೇಗವಾಗಿ ಬೈಕಿನಲ್ಲಿ ಬಂದು ಸರಗಳ್ಳರು ಕೊರಳಲ್ಲಿದ್ದ ಸರ ಎಗರಿಸಿ ಪರಾರಿಯಾಗಿದ್ದಾರೆ.
ಲೀಲಾವತಿ ಎಂಬ ವೃದ್ದೆಯ ಕೊರಳಿನಿಂದ ಚಿನ್ನದ ಸರ ಎಗರಿಸಲಾಗಿದೆ. ಸರ ಎಳೆಯುವ ರಭಸಕ್ಕೆ ವೃದ್ಧೆ ರಸ್ತೆಗೆ ಬಿದ್ದಿದ್ದಾರೆ. ಸಿಸಿ ಕ್ಯಾಮೆರಾದಲ್ಲಿ ಇದೆಲ್ಲ ಸೆರೆಯಾಗಿದೆ. ಲೀಲಾವತಿ ಅವರು ಕೋಟೆ ಬಡಾವಣೆಯ ನಿವಾಸಿಯಾಗಿದ್ದಾರೆ. ಅವರು ಸುಗ್ಗಿಕಲ್ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಸರಗಳ್ಳತನ ಮಾಡಲಾಗಿದೆ.
ಹಾಡಹಗಲೇ ಚಿನ್ನದ ಸರ ಕಳ್ಳತನ ಹಿನ್ನೆಲೆ ಮಹಿಳೆಯರಿಗೆ ಆತಂಕಗೊಂಡಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಜಾಹೀರಾತು