11:07 PM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ವಿಳಂಬವಿಲ್ಲದೆ ಹೆದ್ದಾರಿ ಯೋಜನೆ ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಂಸದ ನಳಿನ್ ತಾಕೀತು

05/09/2021, 10:54

ಮಂಗಳೂರು (reporterkarnataka.com):

ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಯೋಜನೆಗಳನ್ನು ವಿಳಂಬಕ್ಕೆ ಆಸ್ಪದವಿಲ್ಲದಂತೆ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳು ಶ್ರಮಿಸಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್  ಸೂಚಿಸಿದರು. 

ಅವರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಅನುಷ್ಠಾನ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ಅಡ್ಡಹೊಳೆ-ಪೆರಿಯಶಾಂತಿ, ಪೆರಿಯಶಾಂತಿ-ಬಂಟ್ವಾಳ ಹಾಗೂ ಸನ್ನೂರು-ಬಿಕರ್ನಕಟ್ಟೆ ವ್ಯಾಪ್ತಿಯ ರಸ್ತೆ ನಿರ್ಮಾಣ ಯೋಜನೆಗಳನ್ನು ಕೈಗೊಳ್ಳಲಾಗಿದ್ದು, ಈ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ, ಸಾರ್ವಜನಿಕ ಸಂಚಾರಕ್ಕೆ ಅರ್ಪಿಸಬೇಕು ಎಂದರು. 
ಆಗಾಗ್ಯೆ ಸಭೆ ನಡೆಸಿ, ಯೋಜನೆ ಅನುಷ್ಠಾನದಲ್ಲಿ ಆದ ಪ್ರಗತಿಯ ಕುರಿತು ಚರ್ಚಿಸಬೇಕು, ಈ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ತಿರುವು ರಸ್ತೆಗಳನ್ನು ಗುರುತಿಸಿ, ಆ ಪ್ರದೇಶಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಬೇಕು ಎಂದರು. 
 ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶಿಶು ಮೋಹನ್, ಯೋಜನಾ ನಿರ್ದೇಶಕ ದೀಪಕ್ ಕುಮಾರ್, ಎಸ್.ಎಂ. ಔತಾಡೆ ನಿರ್ಮಾಣ ಕಂಪನಿಯ ಯೋಜನಾ ನಿರ್ದೇಶಕ ಮಹೇಂದ್ರ ರೆಡ್ಡಿ, ದಿಲೀಪ್ ಬಿಲ್ಡರ್ಸ್‍ನ ರತ್ನಾಕರ ಸಭೆಯಲ್ಲಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು