6:46 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ವಿಳಂಬವಿಲ್ಲದೆ ಹೆದ್ದಾರಿ ಯೋಜನೆ ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಂಸದ ನಳಿನ್ ತಾಕೀತು

05/09/2021, 10:54

ಮಂಗಳೂರು (reporterkarnataka.com):

ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಯೋಜನೆಗಳನ್ನು ವಿಳಂಬಕ್ಕೆ ಆಸ್ಪದವಿಲ್ಲದಂತೆ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳು ಶ್ರಮಿಸಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್  ಸೂಚಿಸಿದರು. 

ಅವರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಅನುಷ್ಠಾನ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ಅಡ್ಡಹೊಳೆ-ಪೆರಿಯಶಾಂತಿ, ಪೆರಿಯಶಾಂತಿ-ಬಂಟ್ವಾಳ ಹಾಗೂ ಸನ್ನೂರು-ಬಿಕರ್ನಕಟ್ಟೆ ವ್ಯಾಪ್ತಿಯ ರಸ್ತೆ ನಿರ್ಮಾಣ ಯೋಜನೆಗಳನ್ನು ಕೈಗೊಳ್ಳಲಾಗಿದ್ದು, ಈ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ, ಸಾರ್ವಜನಿಕ ಸಂಚಾರಕ್ಕೆ ಅರ್ಪಿಸಬೇಕು ಎಂದರು. 
ಆಗಾಗ್ಯೆ ಸಭೆ ನಡೆಸಿ, ಯೋಜನೆ ಅನುಷ್ಠಾನದಲ್ಲಿ ಆದ ಪ್ರಗತಿಯ ಕುರಿತು ಚರ್ಚಿಸಬೇಕು, ಈ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ತಿರುವು ರಸ್ತೆಗಳನ್ನು ಗುರುತಿಸಿ, ಆ ಪ್ರದೇಶಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಬೇಕು ಎಂದರು. 
 ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶಿಶು ಮೋಹನ್, ಯೋಜನಾ ನಿರ್ದೇಶಕ ದೀಪಕ್ ಕುಮಾರ್, ಎಸ್.ಎಂ. ಔತಾಡೆ ನಿರ್ಮಾಣ ಕಂಪನಿಯ ಯೋಜನಾ ನಿರ್ದೇಶಕ ಮಹೇಂದ್ರ ರೆಡ್ಡಿ, ದಿಲೀಪ್ ಬಿಲ್ಡರ್ಸ್‍ನ ರತ್ನಾಕರ ಸಭೆಯಲ್ಲಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು