10:42 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

Mangalore | ವಿಮಾನ ಹಾರುವ ರನ್‌ವೇಗೆ ಅಚಾನಕ್ ಆಗಿ ನುಗ್ಗಿದ ಲಾರಿ ಕ್ಲೀನರ್ : ಸಿಐಎಸ್‌ಎಫ್ ಸಿಬ್ಬಂದಿಗಳಿಂದ ಬಂಧನ

06/07/2021, 18:27

ಮಂಗಳೂರು (reporterkarnataka news): ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನುಮಾನಾಸ್ಪದವಾಗಿ ವ್ಯಕ್ತಿಯೊಬ್ಬ ಪ್ರವೇಶಿಸಿದ್ದು, ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್ ) ಸಿಬ್ಬಂದಿಗಳು ಪೊಲೀಸರಿಗೊಪ್ಪಿಸಿದ್ದಾರೆ. ನಂತರ ಈತ ದಾರಿ ತಪ್ಪಿ ಪ್ರವೇಶಿಸಿದ ಹೊರ ರಾಜ್ಯದ ಲಾರಿ ಕ್ಲಿನರ್ ಎಂದು ತಿಳಿದು ಬಂದಿದೆ.

ಸೋಮವಾರ ರಾತ್ರಿ 11ರ ವೇಳೆಗೆ ಹಳೆಯ ವಿಮಾನ ನಿಲ್ದಾಣದ ಎಟಿಎಸ್ ವಿಭಾಗದಲ್ಲಿ‌ ರನ್ ವೇ ಕಾಮಗಾರಿ ನಡೆಯುತ್ತಿತ್ತು. ಆ ವೇಳೆಯಲ್ಲಿ ಅಪರಿಚಿತ ವ್ಯಕ್ತಿ ಅಕ್ರಮವಾಗಿ ಪ್ರವೇಶಿಸಿರುವುದು ಕಂಡು ಬಂತು. ತಕ್ಷಣ ಆತನನ್ನು ಗಸ್ತು ತಿರುಗುತ್ತಿದ್ದ ಸಿಐಎಸ್ಎಫ್ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ. ನಂತರ ಬಜಪೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಅನಧಿಕೃತವಾಗಿ ನುಗ್ಗಿದ ವ್ಯಕ್ತಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಪಶ್ಚಿಮ ಬಂಗಾಲದ ಮುರ್ಸಿದಾಬಾದ್ ನ ಬಧುಹಾ ಗ್ರಾಮ ದ ನಿವಾಸಿ ರಾಕೇಶ್ ಎಂದು ಹೇಳಿಕೊಂಡಿದ್ದಾನೆ. ಈತ ಲಾರಿಯಲ್ಲಿ ಕ್ಲೀನರ್ ಆಗಿ ಕೆಲಸ ಮಾಡಿಕೊಂಡಿದ್ದು, ತನ್ನ ಜೊತೆ ಇದ್ದ ಲಾರಿ ಡ್ರೈವರ್ ತನಗೆ ಸಂಬಳ ನೀಡದೆ ಇಲ್ಲೇ ಸಮೀಪದಲ್ಲಿ ಬಿಟ್ಟು ಹೋಗಿದ್ದು ದಾರಿ ಕಾಣದೇ ವಿಮಾನ ನಿಲ್ದಾಣ ಎಂದು ತಿಳಿಯದೇ ಈ ಭಾಗಕ್ಕೆ ಬಂದಿರುತ್ತೇನೆ ಎಂದು ವಿಚಾರಣೆ ವೇಳೆ ತಿಳಿಸಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು