5:23 PM Sunday17 - May 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ…

ಇತ್ತೀಚಿನ ಸುದ್ದಿ

Mangalore | ವಿಮಾನ ಹಾರುವ ರನ್‌ವೇಗೆ ಅಚಾನಕ್ ಆಗಿ ನುಗ್ಗಿದ ಲಾರಿ ಕ್ಲೀನರ್ : ಸಿಐಎಸ್‌ಎಫ್ ಸಿಬ್ಬಂದಿಗಳಿಂದ ಬಂಧನ

06/07/2021, 18:27

ಮಂಗಳೂರು (reporterkarnataka news): ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನುಮಾನಾಸ್ಪದವಾಗಿ ವ್ಯಕ್ತಿಯೊಬ್ಬ ಪ್ರವೇಶಿಸಿದ್ದು, ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್ ) ಸಿಬ್ಬಂದಿಗಳು ಪೊಲೀಸರಿಗೊಪ್ಪಿಸಿದ್ದಾರೆ. ನಂತರ ಈತ ದಾರಿ ತಪ್ಪಿ ಪ್ರವೇಶಿಸಿದ ಹೊರ ರಾಜ್ಯದ ಲಾರಿ ಕ್ಲಿನರ್ ಎಂದು ತಿಳಿದು ಬಂದಿದೆ.

ಸೋಮವಾರ ರಾತ್ರಿ 11ರ ವೇಳೆಗೆ ಹಳೆಯ ವಿಮಾನ ನಿಲ್ದಾಣದ ಎಟಿಎಸ್ ವಿಭಾಗದಲ್ಲಿ‌ ರನ್ ವೇ ಕಾಮಗಾರಿ ನಡೆಯುತ್ತಿತ್ತು. ಆ ವೇಳೆಯಲ್ಲಿ ಅಪರಿಚಿತ ವ್ಯಕ್ತಿ ಅಕ್ರಮವಾಗಿ ಪ್ರವೇಶಿಸಿರುವುದು ಕಂಡು ಬಂತು. ತಕ್ಷಣ ಆತನನ್ನು ಗಸ್ತು ತಿರುಗುತ್ತಿದ್ದ ಸಿಐಎಸ್ಎಫ್ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ. ನಂತರ ಬಜಪೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಅನಧಿಕೃತವಾಗಿ ನುಗ್ಗಿದ ವ್ಯಕ್ತಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಪಶ್ಚಿಮ ಬಂಗಾಲದ ಮುರ್ಸಿದಾಬಾದ್ ನ ಬಧುಹಾ ಗ್ರಾಮ ದ ನಿವಾಸಿ ರಾಕೇಶ್ ಎಂದು ಹೇಳಿಕೊಂಡಿದ್ದಾನೆ. ಈತ ಲಾರಿಯಲ್ಲಿ ಕ್ಲೀನರ್ ಆಗಿ ಕೆಲಸ ಮಾಡಿಕೊಂಡಿದ್ದು, ತನ್ನ ಜೊತೆ ಇದ್ದ ಲಾರಿ ಡ್ರೈವರ್ ತನಗೆ ಸಂಬಳ ನೀಡದೆ ಇಲ್ಲೇ ಸಮೀಪದಲ್ಲಿ ಬಿಟ್ಟು ಹೋಗಿದ್ದು ದಾರಿ ಕಾಣದೇ ವಿಮಾನ ನಿಲ್ದಾಣ ಎಂದು ತಿಳಿಯದೇ ಈ ಭಾಗಕ್ಕೆ ಬಂದಿರುತ್ತೇನೆ ಎಂದು ವಿಚಾರಣೆ ವೇಳೆ ತಿಳಿಸಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು