10:09 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ವಿನಾಯಕ ಬಾಳಿಗ ಹತ್ಯೆ ಪ್ರಕರಣ: ಬಾಳಿಗ ಸಹೋದರಿ ರಾಜ್ಯಪಾಲರ ಭೇಟಿ; ವಿಶೇಷ ತನಿಖಾ ತಂಡ ನೇಮಿಸಲು ಮನವಿ

16/03/2022, 19:55

ಮಂಗಳೂರು(reporterkarnataka.com): ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ(SIT)ವನ್ನು ನೇಮಿಸುವಂತೆ ಬಾಳಿಗಾ ಅವರ ಸಹೋದರಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲಾಟ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಮಂಗಳವಾರ ಬೆಳಗ್ಗೆ ಸುಮಾರು 8.20ರ ವೇಳೆಗೆ ವಿನಾಯಕ ಬಾಳಿಗ ಅವರ ಸಹೋದರಿ ಅನುರಾಧಾ ಬಾಳಿಗ ಅವರು ರಾಜ್ಯಪಾಲರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಅನುರಾಧಾ ಬಾಳಿಗ ಅವರು ಹತ್ಯೆಗೀಡಾದ ತನ್ನ ಸಹೋದರನಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ವಿಶೇಷ ತನಿಖಾ ತಂಡ ನೇಮಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿದರು.

ಈ ಕುರಿತು ರಿಪೋರ್ಟರ್ ಕರ್ನಾಟಕ ಅನುರಾಧಾ ಬಾಳಿಗ ಅವರನ್ನು ಸಂಪರ್ಕಿಸಿದಾಗ, ತಾನು ಮಂಗಳವಾರ ಬೆಳಗ್ಗೆ ಸರ್ಕಿಟ್ ಹೌಸ್ ನಲ್ಲಿ ರಾಜ್ಯಪಾಲರನ್ನು ಭೇಟಿಯಾಗಿರುವುದನ್ನು ದೃಢಪಡಿಸಿದರು. 

ಮನವಿ ಸ್ವೀಕರಿಸಿ ರಾಜ್ಯಪಾಲರು ಬೇಡಿಕೆಯನ್ನು ಪರಿಶೀಲಿಸಿ ತನ್ನಿಂದ ಆಗುವಂತಹ ಸಹಾಯವನ್ನು ಮಾಡುವ ಭರವಸೆ ನೀಡಿದ್ದಾರೆಂದು ಅನುರಾಧಾ ಬಾಳಿಗ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು