6:08 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಗಣೇಶೋತ್ಸವಕ್ಕೆ ವಿನಾಯಕ ರೆಡಿ: 5 ಸಾವಿರಕ್ಕೂ ಹೆಚ್ಚು ಗಣಪತಿ ವಿಗ್ರಹ ರೂಪಿಸಿದ ಎಸ್.ಎನ್.ಹೊಳ್ಳ!

25/08/2025, 17:34

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಕಳೆದ 40 ವರ್ಷಗಳಿಂದ ಐದು ಸಾವಿರಕ್ಕೂ ಹೆಚ್ಚಿನ ಗಣೇಶ ಮೂರ್ತಿಯನ್ನು ನಿರ್ಮಾಣ ಮಾಡಿ ಸಾರ್ವಜನಿಕ ಗಣೇಶೋತ್ಸವಕ್ಕೆ ಒದಗಿಸಿದವರು ಬಂಟ್ವಾಳದ ಶಂಕರ ನಾರಾಯಣ ಹೊಳ್ಳರು ಈ ಬಾರಿಯೂ 100ಕ್ಕೂ ಹೆಚ್ಚಿನ ಗಣೇಶನ ವಿಗ್ರಹವನ್ನು ನಿರ್ಮಾಣ ಮಾಡಿದ್ದು, ಸಾರ್ವಜನಿಕ ಗಣೇಶೋತ್ಸವದಲ್ಲಿ ಪ್ರತಿಷ್ಠಾಪನೆಯಾಗಿ ಪೂಜೆಗೊಳ್ಳಲಿದೆ.


ಹೊಳ್ಳರು ತನ್ನ ತಂದೆ ಎಸ್.ವಿ.ಎಸ್ .ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದ ಬಿ.ಕೃಷ್ಣ ಹೊಳ್ಳರಿಂದ ವಿಗ್ರಹದ ನಿರ್ಮಾಣದ ಕೈಚಳಕವನ್ನು ಕರಗತ ಮಾಡಿಕೊಂಡಿದ್ದಾರೆ. ಆವೆ ಮಣ್ಣಿನಿಂದ ಮಾಡಿದ ವಿಗ್ರಹವು ಯಾವುದೇ ಪೈಂಟ್ ಬಳಸದೆ ವಾಟರ್ ಕಲರ್‌ನಿಂದ ನಿರ್ಮಾಣ ಮಾಡಿರುತ್ತಾರೆ. ಕಳೆದ 3 ತಿಂಗಳಿನಿಂದ ಮೂರ್ತಿ ನಿರ್ಮಾಣದ ಕೆಲಸವನ್ನು ಗಣೇಶೋತ್ಸವ ಸಮಿತಿಗಳ ಅಪೇಕ್ಷೆಯಂತೆ ವಿವಿಧ ಅಕಾರದ ಪೀಠಗಳಲ್ಲಿ ನಿರ್ಮಿಸಿದ್ದಾರೆ. 1ಅಡಿಯಿಂದ 5 ಅಡಿಯವರೆಗಿನ ಮೂರ್ತಿಗಳು ಪಾಣೆಮಂಗಳೂರು ವೀರವಿಠಲ ದೇವಸ್ಥಾನದ ವಠಾರದಲ್ಲಿ ಸಿದ್ಧವಾಗಿದೆ. ಮೂರ್ತಿಯ ಮೇಲೆ ಬೆಳ್ಳಿ ಕಿರೀಟವನ್ನು ಇರಿಸಿ ಗಣೇಶೋತ್ಸವ ಸಂದರ್ಭದಲ್ಲಿ ವಿವಿಧ ಹೂವಿನ ಅಲಂಕಾರಗಳನ್ನು ಮಾಡಲಾಗುತ್ತದೆ. ಮನೆಗಳಲ್ಲಿಯೂ ಪೀತಾಂಬರ ಬಣ್ಣದ ವಿಗ್ರಹವನಿಟ್ಟು ಆರಾಧನೆ ಮಾಡುತ್ತಿದ್ದಾರೆ.
ಬಂಟ್ವಾಳ ತಾಲೂಕಿನಲ್ಲಿ ಸಜಿಪ ಯುವಕ ಮಂಡಲದ 52ನೇ ವರ್ಷದ ಗಣೇಶೋತ್ಸವ , ಕಲ್ಲಡ್ಕದಲ್ಲಿ 50ನೇ ಗಣೇಶೋತ್ಸವ , ಬಿ.ಸಿ.ರೋಡಿನಲ್ಲಿ 46ನೇ ಗಣೇಶೋತ್ಸವ, ಫರಂಗಿಪೇಟೆಯಲ್ಲಿ 43ನೇ ಗಣೇಶೋತ್ಸವ, ಪಾಣೆಮಂಗಳೂರು ನರಿಕೊಂಬು ನವಜೀವನ ವ್ಯಾಯಾಮ ಶಾಲೆಯಲ್ಲಿ 43ನೇ ಗಣೇಶೋತ್ಸವ ಸೇರಿದಂತೆ ವಿವಿಧೆಡೆ ಸಾರ್ವಜನಿಕ ಗಣೇಶೋತ್ಸವಕ್ಕೆ ಸಿದ್ದತೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು