ಇತ್ತೀಚಿನ ಸುದ್ದಿ
ವಿಪರೀತ ಕುಡಿತದ ಚಟ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
03/01/2023, 23:00

ಕಾರ್ಕಳ(reporterkarnataka.com): ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ವೀರೇಂದ್ರ(44) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ವಿಪರೀತ ಮದ್ಯಸೇವನೆ ಮಾಡುವ ಅಭ್ಯಾಸ ಹೊಂದಿದ್ದು, ಮಾನಸಿಕ ಅಸ್ವಸ್ಥೆಯಿಂದ ಬಳಲುತ್ತಿದ್ದರು. ಡಿ.30ರಂದು ಬೆಳ್ಮಣ್ ಗ್ರಾಮದ ಜಂತ್ರದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ಜೀವನದಲ್ಲಿ ಮಾನಸಿಕವಾಗಿನೊಂದಿದ್ದ ವೀರೇಂದ್ರ ಅವರು, ಡಿ.31ರ ಬೆಳಿಗ್ಗೆಯಿಂದ ಜ.2ರ ಬೆಳಿಗ್ಗೆ 8ರ ಮಧ್ಯಾವಧಿಯಲ್ಲಿ ಸಂಬಂಧಿಕರ ಮನೆಯ ಬಳಿಯ ಹಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.