9:51 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ವಿರಾಜಪೇಟೆ: ವ್ಯಾಘ್ರ ದಾಳಿಗೆ 2 ಹಸು ಸಾವು; ಸಿಸಿಟಿವಿಯಲ್ಲಿ ಹುಲಿ ಚಿತ್ರ ಸೆರೆ; ಸ್ಥಳೀಯರಲ್ಲಿ ಆತಂಕ

24/06/2022, 19:35

ಸಾಂದರ್ಭಿಕ ಚಿತ್ರ
ಮಡಿಕೇರಿ(reporterkarnataka.com):
ಕೊಡುಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಘಟ್ಟದಳ ಬಳಿ ಟಾಟಾ ಸಂಸ್ಥೆಯ ಮಾರ್ಗೊಲ್ಲಿ ಎಸ್ಟೇಟ್ ಹಾಗೂ ಪಾಲಿಬೆಟ್ಟ ದ ದುಬಾರಿ ಎಸ್ಟೇಟ್ ನಲ್ಲಿ ಹುಲಿಯ ಹೆಜ್ಜೆ ಗುರುತುಗಳು ಪತ್ತೆಯಾಗಿವೆ. ಎರಡೂ ಕಡೆಯೂ‌ ಒಂದೊಂದು ಹಸುವನ್ನು ಕೊಂದಿದೆ.‌‌ ಎರಡೂ ಕಡೆಯೂ ಒಂದೇ ಹುಲಿ ದಾಳಿ ನಡೆಸಿದೆಯೆ ಅಥವಾ ಎರಡೂ ಬೇರೆ ಬೇರೆಯೆ ಎಂಬುದು ತಿಳಿದು ಬಂದಿಲ್ಲ.

ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪ 10 ಕಿ.ಮೀ ವ್ಯಾಪ್ತಿಯಲ್ಲಿ ಹುಲಿಯ ಚಲನವಲನಗಳು ಕಂಡು ಬಂದಿದ್ದು ಸ್ಥಳೀಯರಲ್ಲಿ ಆತಂಕ ಮೂಡಿದೆ. 

ಘಟ್ಟದಳ ಸಮೀಪದ ಟಾಟಾ ಸಂಸ್ಥೆಯ ಮಾರ್ಗೊಲ್ಲಿ ಎಸ್ಟೇಟ್ ನ ಸಿಸಿಟಿವಿ ಕ್ಯಾಮೆರಾದಲ್ಲಿ ಹುಲಿ ಚಿತ್ರ ಸೆರೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಕೆಲ ದಿನಗಳ ಹಿಂದೆ ಎಸ್ಟೇಟ್ ನಲ್ಲಿ ಹುಲಿ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದವು. ಸಂಸ್ಥೆಯ ವತಿಯಿಂದ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿತ್ತು. ಎಸ್ಟೇಟ್ ನ ತೋಟದ ಒಳಭಾಗದಲ್ಲಿ ಹಸುವೊಂದನ್ನು ಹುಲಿ ಬೇಟೆಯಾಡಿ ಕೊಂದಿದ್ದು, ಸಿ.ಸಿ.ಟಿ‌.ವಿ ಕ್ಯಾಮೆರಾದಲ್ಲಿ  ದೃಶ್ಯ ಸೆರೆಯಾಗಿದೆ. ದಷ್ಟಪುಷ್ಟವಾದ ಹುಲಿಯಾಗಿದ್ದು, 8 ವರ್ಷ ವಯಸ್ಸು ಇರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ತಿತಿಮತಿ ವಲಯ ಅರಣ್ಯಾಧಿಕಾರಿ ಅಶೋಕ್, ಉಪವಲಯ ಅರಣ್ಯಾಧಿಕಾರಿ ಶ್ರೀನಿವಾಸ್ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದು, ಕೂಂಬಿಂಗ್ ಆರಂಭಿಸುವುದಾಗಿ ತಿಳಿಸಿದ್ದಾರೆ. 

ಪಾಲಿಬೆಟ್ಟದಲ್ಲೂ ಆತಂಕ: ಬುಧವಾರ ರಾತ್ರಿ ಪಾಲಿಬೆಟ್ಟ ದ ದುಬಾರಿ ಎಸ್ಟೇಟ್ ನಲ್ಲಿ ಹುಲಿ ದಾಳಿ ನಡೆಸಿ  ಹಸುವೊಂದನ್ನು ಕೊಂದು ಹಾಕಿತ್ತು. ಹುಲಿಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಕ್ಯಾಮೆರಾ ಅಳವಡಿಸಿದೆ‌. ಶುಕ್ರವಾರ ಕ್ಯಾಮೆರಾದಲ್ಲಿ ಹುಲಿ ದೃಶ್ಯ ಸೆರೆಯಾಗಿಲ್ಲ. ಹುಲಿ ಇದೆ ಎಂಬ ಕಾರಣ ಕಾರ್ಮಿಕರು ಕೆಲಸಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದು, ಗ್ರಾಮಸ್ಥರು ಆತಂಕದಲ್ಲಿ ಇದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು