5:44 PM Tuesday13 - May 2025
ಬ್ರೇಕಿಂಗ್ ನ್ಯೂಸ್
ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು…

ಇತ್ತೀಚಿನ ಸುದ್ದಿ

ವಿರಾಜಪೇಟೆ: ವ್ಯಾಘ್ರ ದಾಳಿಗೆ 2 ಹಸು ಸಾವು; ಸಿಸಿಟಿವಿಯಲ್ಲಿ ಹುಲಿ ಚಿತ್ರ ಸೆರೆ; ಸ್ಥಳೀಯರಲ್ಲಿ ಆತಂಕ

24/06/2022, 19:35

ಸಾಂದರ್ಭಿಕ ಚಿತ್ರ
ಮಡಿಕೇರಿ(reporterkarnataka.com):
ಕೊಡುಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಘಟ್ಟದಳ ಬಳಿ ಟಾಟಾ ಸಂಸ್ಥೆಯ ಮಾರ್ಗೊಲ್ಲಿ ಎಸ್ಟೇಟ್ ಹಾಗೂ ಪಾಲಿಬೆಟ್ಟ ದ ದುಬಾರಿ ಎಸ್ಟೇಟ್ ನಲ್ಲಿ ಹುಲಿಯ ಹೆಜ್ಜೆ ಗುರುತುಗಳು ಪತ್ತೆಯಾಗಿವೆ. ಎರಡೂ ಕಡೆಯೂ‌ ಒಂದೊಂದು ಹಸುವನ್ನು ಕೊಂದಿದೆ.‌‌ ಎರಡೂ ಕಡೆಯೂ ಒಂದೇ ಹುಲಿ ದಾಳಿ ನಡೆಸಿದೆಯೆ ಅಥವಾ ಎರಡೂ ಬೇರೆ ಬೇರೆಯೆ ಎಂಬುದು ತಿಳಿದು ಬಂದಿಲ್ಲ.

ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪ 10 ಕಿ.ಮೀ ವ್ಯಾಪ್ತಿಯಲ್ಲಿ ಹುಲಿಯ ಚಲನವಲನಗಳು ಕಂಡು ಬಂದಿದ್ದು ಸ್ಥಳೀಯರಲ್ಲಿ ಆತಂಕ ಮೂಡಿದೆ. 

ಘಟ್ಟದಳ ಸಮೀಪದ ಟಾಟಾ ಸಂಸ್ಥೆಯ ಮಾರ್ಗೊಲ್ಲಿ ಎಸ್ಟೇಟ್ ನ ಸಿಸಿಟಿವಿ ಕ್ಯಾಮೆರಾದಲ್ಲಿ ಹುಲಿ ಚಿತ್ರ ಸೆರೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಕೆಲ ದಿನಗಳ ಹಿಂದೆ ಎಸ್ಟೇಟ್ ನಲ್ಲಿ ಹುಲಿ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದವು. ಸಂಸ್ಥೆಯ ವತಿಯಿಂದ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿತ್ತು. ಎಸ್ಟೇಟ್ ನ ತೋಟದ ಒಳಭಾಗದಲ್ಲಿ ಹಸುವೊಂದನ್ನು ಹುಲಿ ಬೇಟೆಯಾಡಿ ಕೊಂದಿದ್ದು, ಸಿ.ಸಿ.ಟಿ‌.ವಿ ಕ್ಯಾಮೆರಾದಲ್ಲಿ  ದೃಶ್ಯ ಸೆರೆಯಾಗಿದೆ. ದಷ್ಟಪುಷ್ಟವಾದ ಹುಲಿಯಾಗಿದ್ದು, 8 ವರ್ಷ ವಯಸ್ಸು ಇರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ತಿತಿಮತಿ ವಲಯ ಅರಣ್ಯಾಧಿಕಾರಿ ಅಶೋಕ್, ಉಪವಲಯ ಅರಣ್ಯಾಧಿಕಾರಿ ಶ್ರೀನಿವಾಸ್ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದು, ಕೂಂಬಿಂಗ್ ಆರಂಭಿಸುವುದಾಗಿ ತಿಳಿಸಿದ್ದಾರೆ. 

ಪಾಲಿಬೆಟ್ಟದಲ್ಲೂ ಆತಂಕ: ಬುಧವಾರ ರಾತ್ರಿ ಪಾಲಿಬೆಟ್ಟ ದ ದುಬಾರಿ ಎಸ್ಟೇಟ್ ನಲ್ಲಿ ಹುಲಿ ದಾಳಿ ನಡೆಸಿ  ಹಸುವೊಂದನ್ನು ಕೊಂದು ಹಾಕಿತ್ತು. ಹುಲಿಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಕ್ಯಾಮೆರಾ ಅಳವಡಿಸಿದೆ‌. ಶುಕ್ರವಾರ ಕ್ಯಾಮೆರಾದಲ್ಲಿ ಹುಲಿ ದೃಶ್ಯ ಸೆರೆಯಾಗಿಲ್ಲ. ಹುಲಿ ಇದೆ ಎಂಬ ಕಾರಣ ಕಾರ್ಮಿಕರು ಕೆಲಸಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದು, ಗ್ರಾಮಸ್ಥರು ಆತಂಕದಲ್ಲಿ ಇದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು