8:24 AM Tuesday9 - June 2026
ಬ್ರೇಕಿಂಗ್ ನ್ಯೂಸ್
ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ…

ಇತ್ತೀಚಿನ ಸುದ್ದಿ

ವಿರಾಜಪೇಟೆ: ವ್ಯಾಘ್ರ ದಾಳಿಗೆ 2 ಹಸು ಸಾವು; ಸಿಸಿಟಿವಿಯಲ್ಲಿ ಹುಲಿ ಚಿತ್ರ ಸೆರೆ; ಸ್ಥಳೀಯರಲ್ಲಿ ಆತಂಕ

24/06/2022, 19:35

ಸಾಂದರ್ಭಿಕ ಚಿತ್ರ
ಮಡಿಕೇರಿ(reporterkarnataka.com):
ಕೊಡುಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಘಟ್ಟದಳ ಬಳಿ ಟಾಟಾ ಸಂಸ್ಥೆಯ ಮಾರ್ಗೊಲ್ಲಿ ಎಸ್ಟೇಟ್ ಹಾಗೂ ಪಾಲಿಬೆಟ್ಟ ದ ದುಬಾರಿ ಎಸ್ಟೇಟ್ ನಲ್ಲಿ ಹುಲಿಯ ಹೆಜ್ಜೆ ಗುರುತುಗಳು ಪತ್ತೆಯಾಗಿವೆ. ಎರಡೂ ಕಡೆಯೂ‌ ಒಂದೊಂದು ಹಸುವನ್ನು ಕೊಂದಿದೆ.‌‌ ಎರಡೂ ಕಡೆಯೂ ಒಂದೇ ಹುಲಿ ದಾಳಿ ನಡೆಸಿದೆಯೆ ಅಥವಾ ಎರಡೂ ಬೇರೆ ಬೇರೆಯೆ ಎಂಬುದು ತಿಳಿದು ಬಂದಿಲ್ಲ.

ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪ 10 ಕಿ.ಮೀ ವ್ಯಾಪ್ತಿಯಲ್ಲಿ ಹುಲಿಯ ಚಲನವಲನಗಳು ಕಂಡು ಬಂದಿದ್ದು ಸ್ಥಳೀಯರಲ್ಲಿ ಆತಂಕ ಮೂಡಿದೆ. 

ಘಟ್ಟದಳ ಸಮೀಪದ ಟಾಟಾ ಸಂಸ್ಥೆಯ ಮಾರ್ಗೊಲ್ಲಿ ಎಸ್ಟೇಟ್ ನ ಸಿಸಿಟಿವಿ ಕ್ಯಾಮೆರಾದಲ್ಲಿ ಹುಲಿ ಚಿತ್ರ ಸೆರೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಕೆಲ ದಿನಗಳ ಹಿಂದೆ ಎಸ್ಟೇಟ್ ನಲ್ಲಿ ಹುಲಿ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದವು. ಸಂಸ್ಥೆಯ ವತಿಯಿಂದ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿತ್ತು. ಎಸ್ಟೇಟ್ ನ ತೋಟದ ಒಳಭಾಗದಲ್ಲಿ ಹಸುವೊಂದನ್ನು ಹುಲಿ ಬೇಟೆಯಾಡಿ ಕೊಂದಿದ್ದು, ಸಿ.ಸಿ.ಟಿ‌.ವಿ ಕ್ಯಾಮೆರಾದಲ್ಲಿ  ದೃಶ್ಯ ಸೆರೆಯಾಗಿದೆ. ದಷ್ಟಪುಷ್ಟವಾದ ಹುಲಿಯಾಗಿದ್ದು, 8 ವರ್ಷ ವಯಸ್ಸು ಇರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ತಿತಿಮತಿ ವಲಯ ಅರಣ್ಯಾಧಿಕಾರಿ ಅಶೋಕ್, ಉಪವಲಯ ಅರಣ್ಯಾಧಿಕಾರಿ ಶ್ರೀನಿವಾಸ್ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದು, ಕೂಂಬಿಂಗ್ ಆರಂಭಿಸುವುದಾಗಿ ತಿಳಿಸಿದ್ದಾರೆ. 

ಪಾಲಿಬೆಟ್ಟದಲ್ಲೂ ಆತಂಕ: ಬುಧವಾರ ರಾತ್ರಿ ಪಾಲಿಬೆಟ್ಟ ದ ದುಬಾರಿ ಎಸ್ಟೇಟ್ ನಲ್ಲಿ ಹುಲಿ ದಾಳಿ ನಡೆಸಿ  ಹಸುವೊಂದನ್ನು ಕೊಂದು ಹಾಕಿತ್ತು. ಹುಲಿಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಕ್ಯಾಮೆರಾ ಅಳವಡಿಸಿದೆ‌. ಶುಕ್ರವಾರ ಕ್ಯಾಮೆರಾದಲ್ಲಿ ಹುಲಿ ದೃಶ್ಯ ಸೆರೆಯಾಗಿಲ್ಲ. ಹುಲಿ ಇದೆ ಎಂಬ ಕಾರಣ ಕಾರ್ಮಿಕರು ಕೆಲಸಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದು, ಗ್ರಾಮಸ್ಥರು ಆತಂಕದಲ್ಲಿ ಇದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು