5:41 PM Tuesday13 - May 2025
ಬ್ರೇಕಿಂಗ್ ನ್ಯೂಸ್
ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು…

ಇತ್ತೀಚಿನ ಸುದ್ದಿ

ವೀರಾಜಪೇಟೆ: ಅನ್ನ ನೀಡಿದ ಸಂಸ್ಥೆಗೆ ಕನ್ನ;  1 ಲಕ್ಷ ರೂ. ದೋಚಿದ ಇಬ್ಬರು ಡೆಲಿವರಿ ಬಾಯ್ ಗಳ ಬಂಧನ

25/06/2022, 12:18

ಮಡಿಕೇರಿ(reporterkarnataka.com):  ಅನ್ನ ನೀಡಿದ ಸಂಸ್ಥೆಗೆ ಕನ್ನ ಹಾಕಲು ಹೋಗಿ ಇಬ್ಬರು ಆರೋಪಿಗಳು ಪೊಲೀಸ್ ಅತಿಥಿಯಾದ ಘಟನೆ ವೀರಾಜಪೇಟೆ ನಗರದ ಮಲಬಾರ್ ರಸ್ತೆಯಲ್ಲಿ ನಡೆದಿದೆ.

ವೆಬ್ ಸಿರೀಸ್ ನಲ್ಲಿ ಬರುವ ಸೀರಿಯಲ್ ಗಳನ್ನು ವೀಕ್ಷಿಸಿ ಅದೇ ತಂತ್ರವನ್ನು ಬಳಸಿ ನಗದು ಕಳ್ಳತನ ಮಾಡಲು ಹೊರಟು ವೀರಾಜಪೇಟೆ ತಾಲೂಕು ಬೇಟೋಳಿ ಗ್ರಾಮದ ಹೆಗ್ಗಳ ನಿರ್ಮಲಗಿರಿ ಗ್ರಾಮದ ನಿವಾಸಿ ಎಸ್. ಸಿವಿನ್  (೨೦)  ಮತ್ತು ಸೆಬಾಸ್ಟೀನ್ ಡಿಸೋಜಾ (೨೦) ಬಂಧನಕ್ಕೀಡಾಗಿದ್ದಾರೆ.

ಘಟನೆಯ ವಿವರ: ವಿರಾಜಪೇಟೆ ನಗರದ ಮಲಬಾರ್ ರಸ್ತೆಯಲ್ಲಿರುವ ಇನ್ಪಾಕಾರ್ಟ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ 12ರಂದು ರಾತ್ರಿ ನಗದು ಕಳ್ಳತನ ನಡೆದಿತ್ತು. ಬಂಧಿತ ಇಬ್ಬರು ಆರೋಪಿಗಳು  ಬಡ ಕುಟುಂಬದಿಂದ ಬಂದಿರುವರಾಗಿದ್ದಾರೆ. ಕೆಲಸ ಅರಿಸಿಕೊಂಡಿರುವ ವೇಳೆಯಲ್ಲಿ ಸಂಸ್ಥೆಯಲ್ಲಿ ಡೆಲೆವರಿ ಬಾಯ್ ಗಳಾಗಿ ಕೆಲಸಕ್ಕೆ ಸೇರಿಕೊಂಡಿದ್ದರು.

ಮೊದಲಿಗೆ ಪ್ರಕರಣದ ಎರಡನೇ ಆರೋಪಿಯಾಗಿರುವ ಸೆಬಾಸ್ಟೀನ್ ಕೆಲಸ ಗಿಟ್ಟಿಸಿಕೊಳ್ಳುತ್ತಾನೆ. ನಂತರ ಸ್ನೇಹಿತನಾದ ಸಿವಿನ್ ಕೆಲಸಕ್ಕೆ ಸೇರ್ಪಡೆಯಾಗುತ್ತಾನೆ. ಒಂದೇ ಊರಿನವರಾದ ಇರ್ವರು ಸೇವೆಯಲ್ಲಿ ಮುಂದುವರೆಯುತ್ತಾರೆ. ಸಿವಿನ್ ಗೆ ಮೋಬೈಲ್ ನಲ್ಲಿ ಬರುವ  ಮನಿ ಹ್ಯಾಕ್ ವೆಬ್ ಸಿರೀಸ್ ನೋಡುವ ಹುಚ್ಚು ತೆಲೆಗೇರುತ್ತದೆ. ಸಿರೀಸ್ ನಿಂದ ಪ್ರಭಾವಿತನಾದ ಸಿವಿನ್ ತನ್ನ ಮಿತ್ರನಿಗೂ ತಿಳಿಸಿಕೊಡುತ್ತಾನೆ. ನಂತರದಲ್ಲಿ ಫ್ರೀ ಪ್ಲೇನ್ ಸಿದ್ದವಾಗುತ್ತದೆ. ದಿನ ನಿತ್ಯ ಸಂಸ್ಥೆಗೆ ಲಕ್ಷದ ವ್ಯವಹಾರ ನಡೆಯುತ್ತಿದೆ. ಹೇಗಾದರು ಮಾಡಿ ಹಣ ಲಪಾಟಯಿಸಬೇಕು ಎಂದು ಇರ್ವರ ಪ್ಲಾನ್ ಹಾಕುತ್ತಾರೆ. ಅದರಂತೆ ಸಂಸ್ಥೆಗೆ ಸೇರಿದ ಸುಮಾರು 1 ಲಕ್ಷ ರೂ. ಲಪಟಾಯಿಸಿದ್ದರು ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು