1:53 AM Thursday13 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ವೀರಾಜಪೇಟೆ: ಅನ್ನ ನೀಡಿದ ಸಂಸ್ಥೆಗೆ ಕನ್ನ;  1 ಲಕ್ಷ ರೂ. ದೋಚಿದ ಇಬ್ಬರು ಡೆಲಿವರಿ ಬಾಯ್ ಗಳ ಬಂಧನ

25/06/2022, 12:18

ಮಡಿಕೇರಿ(reporterkarnataka.com):  ಅನ್ನ ನೀಡಿದ ಸಂಸ್ಥೆಗೆ ಕನ್ನ ಹಾಕಲು ಹೋಗಿ ಇಬ್ಬರು ಆರೋಪಿಗಳು ಪೊಲೀಸ್ ಅತಿಥಿಯಾದ ಘಟನೆ ವೀರಾಜಪೇಟೆ ನಗರದ ಮಲಬಾರ್ ರಸ್ತೆಯಲ್ಲಿ ನಡೆದಿದೆ.

ವೆಬ್ ಸಿರೀಸ್ ನಲ್ಲಿ ಬರುವ ಸೀರಿಯಲ್ ಗಳನ್ನು ವೀಕ್ಷಿಸಿ ಅದೇ ತಂತ್ರವನ್ನು ಬಳಸಿ ನಗದು ಕಳ್ಳತನ ಮಾಡಲು ಹೊರಟು ವೀರಾಜಪೇಟೆ ತಾಲೂಕು ಬೇಟೋಳಿ ಗ್ರಾಮದ ಹೆಗ್ಗಳ ನಿರ್ಮಲಗಿರಿ ಗ್ರಾಮದ ನಿವಾಸಿ ಎಸ್. ಸಿವಿನ್  (೨೦)  ಮತ್ತು ಸೆಬಾಸ್ಟೀನ್ ಡಿಸೋಜಾ (೨೦) ಬಂಧನಕ್ಕೀಡಾಗಿದ್ದಾರೆ.

ಘಟನೆಯ ವಿವರ: ವಿರಾಜಪೇಟೆ ನಗರದ ಮಲಬಾರ್ ರಸ್ತೆಯಲ್ಲಿರುವ ಇನ್ಪಾಕಾರ್ಟ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ 12ರಂದು ರಾತ್ರಿ ನಗದು ಕಳ್ಳತನ ನಡೆದಿತ್ತು. ಬಂಧಿತ ಇಬ್ಬರು ಆರೋಪಿಗಳು  ಬಡ ಕುಟುಂಬದಿಂದ ಬಂದಿರುವರಾಗಿದ್ದಾರೆ. ಕೆಲಸ ಅರಿಸಿಕೊಂಡಿರುವ ವೇಳೆಯಲ್ಲಿ ಸಂಸ್ಥೆಯಲ್ಲಿ ಡೆಲೆವರಿ ಬಾಯ್ ಗಳಾಗಿ ಕೆಲಸಕ್ಕೆ ಸೇರಿಕೊಂಡಿದ್ದರು.

ಮೊದಲಿಗೆ ಪ್ರಕರಣದ ಎರಡನೇ ಆರೋಪಿಯಾಗಿರುವ ಸೆಬಾಸ್ಟೀನ್ ಕೆಲಸ ಗಿಟ್ಟಿಸಿಕೊಳ್ಳುತ್ತಾನೆ. ನಂತರ ಸ್ನೇಹಿತನಾದ ಸಿವಿನ್ ಕೆಲಸಕ್ಕೆ ಸೇರ್ಪಡೆಯಾಗುತ್ತಾನೆ. ಒಂದೇ ಊರಿನವರಾದ ಇರ್ವರು ಸೇವೆಯಲ್ಲಿ ಮುಂದುವರೆಯುತ್ತಾರೆ. ಸಿವಿನ್ ಗೆ ಮೋಬೈಲ್ ನಲ್ಲಿ ಬರುವ  ಮನಿ ಹ್ಯಾಕ್ ವೆಬ್ ಸಿರೀಸ್ ನೋಡುವ ಹುಚ್ಚು ತೆಲೆಗೇರುತ್ತದೆ. ಸಿರೀಸ್ ನಿಂದ ಪ್ರಭಾವಿತನಾದ ಸಿವಿನ್ ತನ್ನ ಮಿತ್ರನಿಗೂ ತಿಳಿಸಿಕೊಡುತ್ತಾನೆ. ನಂತರದಲ್ಲಿ ಫ್ರೀ ಪ್ಲೇನ್ ಸಿದ್ದವಾಗುತ್ತದೆ. ದಿನ ನಿತ್ಯ ಸಂಸ್ಥೆಗೆ ಲಕ್ಷದ ವ್ಯವಹಾರ ನಡೆಯುತ್ತಿದೆ. ಹೇಗಾದರು ಮಾಡಿ ಹಣ ಲಪಾಟಯಿಸಬೇಕು ಎಂದು ಇರ್ವರ ಪ್ಲಾನ್ ಹಾಕುತ್ತಾರೆ. ಅದರಂತೆ ಸಂಸ್ಥೆಗೆ ಸೇರಿದ ಸುಮಾರು 1 ಲಕ್ಷ ರೂ. ಲಪಟಾಯಿಸಿದ್ದರು ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು