ಇತ್ತೀಚಿನ ಸುದ್ದಿ
ವಿರಾಜಪೇಟೆ | ಮನೆಯ ಹಿತ್ತಲಿನಲ್ಲಿ ಗಾಂಜಾ ಬೆಳೆದು ಪೊಲೀಸ್ ಅತಿಥಿಯಾದ ಬಸವ: 2 ಕೆಜಿ ಗಾಂಜಾ ವಶ
17/04/2026, 22:31
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ತಿತಿಮತಿಯ ದೊಡ್ಡ ರೇಷ್ಮೆ ಹಾಡಿಯ ಮನೆಯ ಹಿತ್ತಲಿನಲ್ಲಿ ಗಾಂಜಾ ಬೆಳೆದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಗಾಂಜಾ ವ್ಯಸನಿಯಾಗಿರುವ ಬಸವ (69) ಸ್ವಂತ ಖರ್ಚಿಗಾಗಿ ಗಾಂಜಾ ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಪೊಲೀಸರು ಬಂಧಿತನಿಂದ 3 ಗಾಂಜಾ ಗಿಡ ಅಂದಾಜು 2 ಕೆಜಿಯಷ್ಟು ಗಾಂಜಾ ವಶಕ್ಕೆ ಪಡೆಯಲಾಗಿದೆ.












