7:59 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ವಿರಾಜಪೇಟೆ: ರಸ್ತೆ ಕಾಮಗಾರಿ ಆರಂಭಿಸುವಂತೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

26/11/2025, 12:29

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@ail.com

ಮಳೆ ನಿಂತ ಮೇಲೆ ಮುಖ್ಯ ರಸ್ತೆಯ ಕಾಮಗಾರಿ ಮಾಡುತ್ತೇವೆ ಎಂದು ಹೇಳಿದ್ದ ಶಾಸಕರು ಮಳೆಗಾಲ ಮುಗಿದು ಬಿಸಿಲು ಆರಂಭಿಸಿದೆ ಆದರೂ ಕೂಡ ರಸ್ತೆಯ ಕಾಮಗಾರಿ ಮಾಡಲು ನಿರ್ಲಕ್ಷ್ಯ ತೋರಿದ್ದಾರೆ ಎಂದು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಲೋಕೋಪಯೋಗಿ ಇಲಾಖೆಯ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು.

ವಿರಾಜಪೇಟೆ ಮಂಡಳ ಬಿಜೆಪಿ ವತಿಯಿಂದ ನಡೆದ ಪ್ರತಿಭಟನೆ ನಲ್ಲಿ ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ ಮಾತನಾಡಿ ನನ್ನ ಅಧಿಕಾರದ ಅವಧಿಯಲ್ಲಿ ಮಾಡಿದ್ದ ತಿತಿಮತಿ ಗೋಣಿಕೊಪ್ಪ ವಿರಾಜಪೇಟೆ ಮುಖ್ಯ ರಸ್ತೆ ಮಾತ್ರ ಉತ್ತಮ ರೀತಿಯಲ್ಲಿ ಇದೆ‌. ಇತ್ತೀಚಿನ ಬಂದ ಶಾಸಕರು ಯಾವುದೇ ಮುಖ್ಯ ರಸ್ತೆಗೆ ಅನುದಾನ ತಂದ್ದಿಲ್ಲ. ಒಂದು ವೇಳೆ ತಂದ್ದಿದ್ದರೆ ಮುಖ್ಯ ರಸ್ತೆಯ ಕಾಮಗಾರಿ ಆಗುತ್ತಿತ್ತು. ಸದ್ಯಕ್ಕೆ ಕ್ಷೇತ್ರದ ಎಲ್ಲಾ ಕಡೆ ರಸ್ತೆ ಕಾಮಗಾರಿ ಕೂಡಲೇ ಆರಂಭಿಸುವಂತೆ ಇದೇ ಸಂದರ್ಭ ಒತ್ತಾಯಿಸಿದರು.
ನಾನು ತಂದ ಅನುದಾನ ಮಾತ್ರ ಬಿಡುಗಡೆ ಅಗಿದೆ ಅಷ್ಟೇ. ನೂತನ ಶಾಸಕರು ಮುಖ್ಯ ರಸ್ತೆಗೆ ಯಾವುದೇ ಅನುದಾನ ಇದುವರೆಗೂ ತರಲಿಲ್ಲ ಎಂದು ಕೆ.ಜಿ ಬೊಪಯ್ಯ ಸ್ಪಷ್ಟಪಡಿಸಿದರು.
ಕೊಡಗಿನ ಎಲ್ಲಾ ಗ್ರಾಮಾಂತರ ರಸ್ತೆಗೆ ತಂದ ಅನುದಾನವನ್ನು ಕಾಂಗ್ರೆಸ್ ಕಾರ್ಯಕರ್ತರು ಅವರ ವ್ಯವಸ್ಥೆಗೆ ತಕ್ಕಂತೆ ಬಳಸಿಕೊಂಡಿದ್ದಾರೆ. ಅದು ಕೂಡ ದೊಡ್ಡ ಸಮಸ್ಯೆ ಆಗಿದೆ ಎಂದು ಜಿಲ್ಲಾ ಅದ್ಯಕ್ಷರಾದ ರವಿ ಕಾಳಪ್ಪ ತಿಳಿಸಿದರು.
ಪ್ರತಿಭಟನೆಯಲ್ಲಿ ವಿರಾಜಪೇಟೆ ನಗರ ಹಾಗೂ ಗ್ರಾಮಾಂತರ ಪ್ರದೇಶದ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ
ಸದಸ್ಯರಾದ ಅಚ್ಚಪಂಡ ಮಹೇಶ್.ಶಶಿ ಸುಬ್ರಹ್ಮಣಿ,ಮಂಡಳ ಅದ್ಯಕ್ಷರಾದ ಸುವಿನ್ ಗಣಪತಿ, ಚೆಪ್ಪುಡಿರ ರಾಕೇಶ್ ವಿರಾಜಪೇಟೆ ಪಟ್ಟಣ ಪಂಚಾಯತಿ ಬಿಜೆಪಿ ಮಾಜಿ ಸದಸ್ಯರು, ಹಾಗೂ ಶಕ್ತಿ ಕೇಂದ್ರದ ಪ್ರಮುಖರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು