5:27 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ

08/08/2026, 13:44

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ರೈತ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿ ಗಂಭೀರ ಗಾಯ ಗೊಳಿಸಿದ ಘಟನೆ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಯಲ್ಲಿ ನಡೆದಿದೆ. ಗ್ರಾಮದ ಕಾಫಿ ಬೆಳೆಗಾರರಾದ ಮೂಡಗದ್ದೆ ಜಯ ಎಂಬುವವರ ಪತ್ನಿ ಲೀಲಾ ಚಿರತೆ ದಾಳಿಗೆ ಒಳಗಾಗಿ ಪ್ರಣಾಪಾಯ ದಿಂದ ಪಾರಾಗಿ ಗೋಣಿಕೊಪ್ಪ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಫಿ ತೋಟದಲ್ಲಿ ಕಾರ್ಮಿಕರು ಮಾಡುತ್ತಿರುವ ಕೆಲಸ ನೋಡಲೆಂದು ತೆರಳಿದ ಸಂದರ್ಭ ಈ ದಾಳಿ ನಡೆದಿದ್ದು, ಅಲ್ಲೇ ಇದ್ದ ಕಾರ್ಮಿಕರು ಲೀಲಾ ರನ್ನು ಹೆಚ್ಚಿನ ಅನಾಹುತ ಆಗದಂತೆ ಚಿರತೆಯಿಂದ ರಕ್ಷಣೆ ಮಾಡಿದ್ದಾರೆ. ಘಟನೆ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದು, ಚಿರತೆಯ ಚಲನವಲನ ಬಗ್ಗೆ ಕಾರ್ಯಾಚರಣೆ ನಡೆಸಿದ್ದಾರೆ. ಸದ್ಯ ಕ್ಯಾಮೆರಾ ಅಳವಡಿಕೆ ಮಾಡಲಾಗಿದ್ದು, ಸೆರೆಗೆ ಬೋನ್ ಇರಿಸಿದ್ದು, ಮತ್ತೊಂದೆಡೆ ಸಾಕಾನೆ ಬಳಸಿ ಕಾರ್ಯಾಚರಣೆ ನಡೆಸಲು ನಿರ್ಧಾರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು