ಇತ್ತೀಚಿನ ಸುದ್ದಿ
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ
08/08/2026, 13:44
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ರೈತ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿ ಗಂಭೀರ ಗಾಯ ಗೊಳಿಸಿದ ಘಟನೆ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಯಲ್ಲಿ ನಡೆದಿದೆ. ಗ್ರಾಮದ ಕಾಫಿ ಬೆಳೆಗಾರರಾದ ಮೂಡಗದ್ದೆ ಜಯ ಎಂಬುವವರ ಪತ್ನಿ ಲೀಲಾ ಚಿರತೆ ದಾಳಿಗೆ ಒಳಗಾಗಿ ಪ್ರಣಾಪಾಯ ದಿಂದ ಪಾರಾಗಿ ಗೋಣಿಕೊಪ್ಪ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಫಿ ತೋಟದಲ್ಲಿ ಕಾರ್ಮಿಕರು ಮಾಡುತ್ತಿರುವ ಕೆಲಸ ನೋಡಲೆಂದು ತೆರಳಿದ ಸಂದರ್ಭ ಈ ದಾಳಿ ನಡೆದಿದ್ದು, ಅಲ್ಲೇ ಇದ್ದ ಕಾರ್ಮಿಕರು ಲೀಲಾ ರನ್ನು ಹೆಚ್ಚಿನ ಅನಾಹುತ ಆಗದಂತೆ ಚಿರತೆಯಿಂದ ರಕ್ಷಣೆ ಮಾಡಿದ್ದಾರೆ. ಘಟನೆ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದು, ಚಿರತೆಯ ಚಲನವಲನ ಬಗ್ಗೆ ಕಾರ್ಯಾಚರಣೆ ನಡೆಸಿದ್ದಾರೆ. ಸದ್ಯ ಕ್ಯಾಮೆರಾ ಅಳವಡಿಕೆ ಮಾಡಲಾಗಿದ್ದು, ಸೆರೆಗೆ ಬೋನ್ ಇರಿಸಿದ್ದು, ಮತ್ತೊಂದೆಡೆ ಸಾಕಾನೆ ಬಳಸಿ ಕಾರ್ಯಾಚರಣೆ ನಡೆಸಲು ನಿರ್ಧಾರಿಸಲಾಗಿದೆ.












