12:22 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ ಬಂಧನ

20/09/2025, 21:58

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆಯ ಗಾಂಧಿನಗರದಲ್ಲಿ ಬ್ಯೂಟಿ ಪಾರ್ಲರ್ ಹೆಸರಿನಲ್ಲಿ ಸ್ಪಾ ಮತ್ತು ಮಸಾಜ್ ಸೆಂಟರ್ ಜೊತೆಗೆ ವೇಶ್ಯಾವಾಟಿಕೆ ಯಲ್ಲಿ ತೊಡಗಿದ್ದ ಪ್ರಕರಣ ಸಂಬಂಧಿಸಿದಂತೆ ಕೊಡಗಿನ ಒಬ್ಬ ಪಿಂಪ್ ಸಹಿತ ಕೇರಳದ ಮೂವರ ಬಂಧನವಾಗಿದೆ.ಕಳೆದ ಆರು ತಿಂಗಳು ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದ ಈ ತಂಡ ಪೋಲಿಸ್ ಹಾಗೂ ಗುಪ್ತಚರ ದಳದ ನಾಲ್ವರ ಹೆಡೆ ಮುರಿ ಕಟ್ಟಿದ್ದು, ಕೃತ್ಯಕ್ಕೆ ಬಳಕೆಯಾಗಿದ್ದ ನಾಲ್ವರು ಮಹಿಳೆಯರನ್ನು ರಕ್ಷಿಸಲಾಗಿದೆ.

ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದಲ್ಲಿನ ಆರೆಂಜ್ ಫ್ಯಾಮಿಲಿ ಬ್ಯೂಟಿ ಪಾಲರ್ & ಸ್ಪಾ ಎಂಬ ಹೆಸರಿನಲ್ಲಿ ಮಸಾಜ್ ನೆಪದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಕುರಿತು ಮಾಹಿತಿ ಸಂಗ್ರಹಿಸಿ ದಿನಾಂಕ ಸೆಪ್ಟೆಂಬರ್ 18 ರಂದು ದಾಳಿ ನಡೆಸಿದ ಪೊಲೀಸರು ಮಹಿಳೆಯರನ್ನು ರಕ್ಷಣೆ ಮಾಡಿ ಮಹಿಳಾ ಸಾಂತ್ವಾನ ಕೇಂದ್ರಕ್ಕೆ ಕಳುಹಿಸಿದ್ದು ವೇಶ್ಯಾವಾಟಿಕೆ ನಡೆಸುತ್ತಿದ್ದ ಈ 4 ಜನ ಆರೋಪಿಗಳ ಮೇಲೆ ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಕಲಂ: 3, 4, 5(ಸಿ), 7 Immortal Traffic (Prevention) Act ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಆರೋಪಿಗಳು ಕೇರಳದ ಕಣ್ಣೂರು ಮೂಲದ ಪ್ರದೀಪನ್. ಪಿ.ಪಿ, (48), ಕಲೇಶ್ ಕುಮಾರ್(45), ಶಾಜಿ(38) ಮತ್ತು ಕೊಡಗಿನ ವಿರಾಜಪೇಟೆಯ ಅಮ್ಮತಿ ಗ್ರಾಮದ ನೆಲ್ಲಮಕ್ಕಡ ಎ. ಪೊನ್ನಣ್ಣ(48) ಎಂದು ಗುರುತಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು