7:59 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ವಿರಾಜಪೇಟೆ | ಕಣ್ಣಂಗಾಲ ಗ್ರಾಮದಲ್ಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ: ಮೃತನ ಕುಟುಂಬಕ್ಕೆ ಪರಿಹಾರ ವಿತರಣೆ

10/08/2026, 19:44

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆ ತಾಲೂಕು ಅಮ್ಮತ್ತಿ ಸಮೀಪದ ಕಣ್ಣಂಗಾಲ ಗ್ರಾಮ ಪಂಚಾಯತಿಯ ಯಡೂರು‌ ಗ್ರಾಮದಲ್ಲಿ ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿದ್ದ ಕಾರ್ಮಿಕ ಅಣ್ಣಪ್ಪನ ಕುಟುಂಬಕ್ಕೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ತೆರಳಿ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಇದೇ ಸಂದರ್ಭದಲ್ಲಿ, ದುರ್ದೈವಿಯ ಕುಟುಂಬಕ್ಕೆ ಸರ್ಕಾರ ನೀಡುವ ಪರಿಹಾರ ಮಟ್ಟದ ಮೊದಲ ಭಾಗವಾಗಿ ₹5 ಲಕ್ಷದ ಚೆಕ್ ವಿತರಿಸಿದರು.


ಘಟನೆ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಬಳಿಕ ಅರಣ್ಯ ಕಂಟ್ರೋಲ್ ರೂಂಗೆ ಭೇಟಿ ನೀಡಿದ ಮಾನ್ಯ ಶಾಸಕರು, ಅಲ್ಲಿಯ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ DFO ಹಾಗೂ ಇತರ ಅಧಿಕಾರಿಗಳಿಗೆ 24*7 ಪರಿಸ್ಥಿತಿಯನ್ನು ಗಮನಿಸುವಂತೆಯೂ ಹಾಗೂ ರೇಡಿಯೋ ಕಾಲರ್ ಅಳವಡಿಸಿದ ಕಾಡುಪ್ರಾಣಿಗಳ ಪ್ರತಿ ಚಲನವಲನಗಳನ್ನು ಗಮನಿಸುತ್ತಾ, ಸಾರ್ವಜನಿಕರಿಗೆ ಮಾಹಿತಿ ನೀಡಿ ಜಾಗ್ರಿತರಿರುವಂತೆ ಸೂಚಿಸುತ್ತಿರಬೇಕೆಂದು ಖಡಕ್ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕಣ್ಣಂಗಾಲ ವಲಯ ಅಧ್ಯಕ್ಷರಾದ ಮಚ್ಚಾರಂಡ ಕಿರಣ್,ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು