ಇತ್ತೀಚಿನ ಸುದ್ದಿ
ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು
27/06/2026, 17:24
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆಯೊಬ್ಬರು ಪ್ರಾಣಾಪಾಯದಿಂದ ಪಾರಾದ ಘಟನೆ ವಿರಾಜಪೇಟೆ ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ನಡೆದಿದೆ.
ಕೆಲಸಕ್ಕೆ ತೆರಳಿದ್ದ ಕಾರ್ಮಿಕರ ಮೇಲೆ ಏಕಾಏಕಿ ದಾಳಿಗೆ ಕಾಡಾನೆ ಮುಂದಾಗಿತ್ತು.
ಆನೆ ದಾಳಿಯಿಂದ ತಪ್ಪಿಸಿಕೊಳ್ಳಲು ಎದ್ದುಬಿದ್ದು ಕಾರ್ಮಿಕ ಮಹಿಳೆ ಓಡಿದ್ದಾರೆ.
ಮಹಿಳೆಯ ತಲೆ ಹಾಗೂ ಕಾಲಿಗೆ ಪೆಟ್ಟು ಬಿದ್ದಿದೆ.
ಗಾಯಗಳೊಂದಿಗೆ ಮಹಿಳೆ ಪಾರಾಗಿದ್ದಾರೆ.












