12:49 AM Saturday11 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

Virajpete | ಸಿದ್ದಾಪುರ: ಗಣತಿಗೆ ತೆರಳಿದ್ದ ಶಿಕ್ಷಕನ ಮೇಲೆ ಕಾಡಾನೆ ದಾಳಿ; ತೀವ್ರ ಗಾಯ

08/10/2025, 13:46

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಜಾತಿಗಣತಿ ಸಮೀಕ್ಷೆಗೆ ತೆರಳುತ್ತಿದ್ದ ಶಿಕ್ಷಕನ ಮೇಲೆ ಕಾಡಾನೆ ದಾಳಿ ನಡೆದ ಘಟನೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರದ ಮಾಲ್ದಾರೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಅರಣ್ಯದ ಅಂಚಿನ ಅವರೆಗುಂದ ಅರಣ್ಯ ಪ್ರದೇಶದಲ್ಲಿ ಗೋಣಿಕೊಪ್ಪ ಪ್ರೌಢಶಾಲೆಯ ಶಿಕ್ಷಕ ಶಿವರಾಮ್ ತಮ್ಮ ಬೈಕ್ ನಲ್ಲಿ ಮಾಲ್ದಾರೆ ಮೂಲಕ ಅವರೆಗುಂದ ಬಸವನಹಳ್ಳಿ ಮಾರ್ಗವಾಗಿ ದುಬಾರೆ ಹಾಡಿಗೆ ಸಮೀಕ್ಷೆಗೆ ತೆರಳುತ್ತಿದ್ದ ವೇಳೆ ಶಿಕ್ಷಕ ಶಿವರಾಮ್ ಮೇಲೆ ದಾಳಿಗೆ ಒಂಟಿ ಸಲಗ ಮುಂದಾಗಿದ್ದು, ಗಾಬರಿಯಿಂದ ಬೈಕ್ ನಿಂದ ಬಿದ್ದು ಕಾಲಿಗೆ ಗಂಭೀರ ಗಾಯಗಳಿಂದ ಆನೆ ಯಿಂದ ತಪ್ಪಿಸಿಕೊಂಡಿದ್ದಾರೆ. ಬಳಿಕ ಸ್ಥಳೀಯರ ಸಹಾಯದಿಂದ ಸಿದ್ದಾಪುರ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ವಿರಾಜಪೇಟೆ ತಾಲ್ಲೂಕು ತಹಸೀಲ್ದಾರ್ ಪ್ರವೀಣ್ ಕುಮಾರ್ ಹಾಗೂ ಕಂದಾಯ ಪರಿವಿಕ್ಷಕ ಅನಿಲ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು