1:39 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Virajpete | ಸಿದ್ದಾಪುರ: ಗಣತಿಗೆ ತೆರಳಿದ್ದ ಶಿಕ್ಷಕನ ಮೇಲೆ ಕಾಡಾನೆ ದಾಳಿ; ತೀವ್ರ ಗಾಯ

08/10/2025, 13:46

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಜಾತಿಗಣತಿ ಸಮೀಕ್ಷೆಗೆ ತೆರಳುತ್ತಿದ್ದ ಶಿಕ್ಷಕನ ಮೇಲೆ ಕಾಡಾನೆ ದಾಳಿ ನಡೆದ ಘಟನೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರದ ಮಾಲ್ದಾರೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಅರಣ್ಯದ ಅಂಚಿನ ಅವರೆಗುಂದ ಅರಣ್ಯ ಪ್ರದೇಶದಲ್ಲಿ ಗೋಣಿಕೊಪ್ಪ ಪ್ರೌಢಶಾಲೆಯ ಶಿಕ್ಷಕ ಶಿವರಾಮ್ ತಮ್ಮ ಬೈಕ್ ನಲ್ಲಿ ಮಾಲ್ದಾರೆ ಮೂಲಕ ಅವರೆಗುಂದ ಬಸವನಹಳ್ಳಿ ಮಾರ್ಗವಾಗಿ ದುಬಾರೆ ಹಾಡಿಗೆ ಸಮೀಕ್ಷೆಗೆ ತೆರಳುತ್ತಿದ್ದ ವೇಳೆ ಶಿಕ್ಷಕ ಶಿವರಾಮ್ ಮೇಲೆ ದಾಳಿಗೆ ಒಂಟಿ ಸಲಗ ಮುಂದಾಗಿದ್ದು, ಗಾಬರಿಯಿಂದ ಬೈಕ್ ನಿಂದ ಬಿದ್ದು ಕಾಲಿಗೆ ಗಂಭೀರ ಗಾಯಗಳಿಂದ ಆನೆ ಯಿಂದ ತಪ್ಪಿಸಿಕೊಂಡಿದ್ದಾರೆ. ಬಳಿಕ ಸ್ಥಳೀಯರ ಸಹಾಯದಿಂದ ಸಿದ್ದಾಪುರ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ವಿರಾಜಪೇಟೆ ತಾಲ್ಲೂಕು ತಹಸೀಲ್ದಾರ್ ಪ್ರವೀಣ್ ಕುಮಾರ್ ಹಾಗೂ ಕಂದಾಯ ಪರಿವಿಕ್ಷಕ ಅನಿಲ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು