10:13 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ವೈರಲ್ ಮದುವೆ ಪ್ರಕರಣಕ್ಕೆ ಟ್ವಿಸ್ಟ್ : ಇಬ್ಬರೂ ಸೋದರಿಯರ ಮುದ್ದಿನ ಗಂಡನಾಗಲು ಹೊರಟವನಿಗೆ ಬಿತ್ತು ಕೇಸ್

16/05/2021, 20:38

ಕೋಲಾರ(Reporter Karnataka News)

ಅಕ್ಕ ತಂಗಿ ಇಬ್ಬರನ್ನೂ ಮದುವೆಯಾದ ಯುವಕನೊಬ್ಬನ ಫೋಟೊ ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇಬ್ಬರು ಹೆಂಡತಿಯರ ಮುದ್ದಿನ ಗಂಡನಾಗಿ ವೈರಲ್ ಆಗಿದ್ದ ಯುವಕನ ಪರಿಣಯ ಪ್ರಸಂಗಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

ಮದುವೆಯಾದ ಸಹೋದರಿಯರಲ್ಲಿ ತಂಗಿ ಅಪ್ರಾಪ್ತೆಯಾಗಿದ್ದು, ಆಕೆಯನ್ನು ಮದುವೆ ಆಗಿದ್ದಕ್ಕಾಗಿ ವರನನ್ನು ಕೋಲಾರ ಪೊಲೀಸರು ಬಂಧಿಸಿದ್ದಾರೆ.

ಕೋಲಾರದಲ್ಲಿ ತಂಗಿ ಜೊತೆ ಮಾತು ಬಾರದ ಅಕ್ಕನನ್ನು ಮದುವೆ ಆಗಿ ಹೀರೋ ಎನಿಸಿಕೊಂಡಿದ್ದ ಮುಳಬಾಗಿಲಿನ ಯುವಕ ಉಮಾಪತಿ ಅವರನ್ನು ಚೈಲ್ಡ್ ಮ್ಯಾರೇಜ್ ಆಕ್ಟ್ ಪ್ರಕರಣದಲ್ಲಿ ಬಂಧಿಸಿದ್ದಾರೆ.

ಮದುವೆ ಪ್ರಕರಣದಲ್ಲಿ ಉಮಾಪತಿ, ಉಮಾಪತಿ ತಾಯಿ- ತಂದೆ, ಹುಡುಗಿ ತಾಯಿ-ತಂದೆ ಹಾಗೂ ಮದುವೆ ಮಾಡಿಸಿದ ಪೂಜಾರಿ ವಿರುದ್ಧವೂ ಮುಳಬಾಗಿಲು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು